ಬ್ರೇಕಿಂಗ್ ನ್ಯೂಸ್
14-01-21 04:15 pm Source: FILMIBEAT Manjunatha C ಸಿನಿಮಾ
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ನಟ ಪುನೀತ್ ರಾಜ್ಕುಮಾರ್ ಮನೆಗೆ ಇಂದು ಭೇಟಿ ನೀಡಿದ್ದರು.
ಜಮೀರ್ ಅಹ್ಮದ್ ಪುತ್ರಿಯ ವಿವಾಹ ಇದೇ ತಿಂಗಳು ನಡೆಯಲಿದ್ದು, ಮದುವೆಗೆ ಆಮಂತ್ರಣ ಪತ್ರಿಕೆ ನೀಡಲು ಜಮೀರ್ ಅಹ್ಮದ್ ಅವರು ತಮ್ಮ ಪುತ್ರನನ್ನೂ ಜೊತೆ ಮಾಡಿಕೊಂಡು ಪುನೀತ್ ರಾಜ್ಕುಮಾರ್ ಸೇರಿ ಹಲವು ಸಿನಿ ತಾರೆಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ಜಮೀರ್ ಅವರು ಪುತ್ರಿಯ ವಿವಾಹಕ್ಕೆ ಜಮೀರ್ ಅನ್ನು ಆಹ್ವಾನಿಸಿದ್ದು, ಪುನೀತ್ ಜೊತೆಯಲ್ಲಿ ಕೆಲ ಕಾಲ ಕಳೆದು ಉಭಯ ಕುಶಲೋಪರಿಯನ್ನು ಸಹ ಮಾಡಿದ್ದಾರೆ. ಪುನೀತ್ ಅವರನ್ನು ಜಮೀರ್ ಮಗಳ ಮದುವೆಗೆ ಆಹ್ವಾನಿಸುತ್ತಿರುವ ಚಿತ್ರಗಳನ್ನು ಜಮೀರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಶ್, ಸುದೀಪ್, ರಾಘಣ್ಣನ ಮನೆಗೆ ಭೇಟಿ
ಪುನೀತ್ ಮನೆಗೆ ಭೇಟಿ ಕೊಟ್ಟ ಬಳಿಕ ನಟರಾದ ಸುದೀಪ್, ಯಶ್ ನಿವಾಸಗಳಿಗೂ ಭೇಟಿ ಕೊಟ್ಟ ಜಮೀರ್ ಹಾಗೂ ಅವರ ಪುತ್ರ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ನಿವಾಸಕ್ಕೂ ಜಮೀರ್ ಭೇಟಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ, ಶಿವರಾಜ್ ಕುಮಾರ್, ದುನಿಯಾ ವಿಜಯ್ ಅವರಿಗೂ ಆಹ್ವಾನ ನೀಡಿದ್ದಾರೆ ಜಮೀರ್.

ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಗೂ ಆಹ್ವಾನ
ಜಮೀರ್ ಅವರು ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡುತ್ತಿದ್ದು, ಹಲವಾರು ರಾಜಕೀಯ ಮುಖಂಡರನ್ನು, ಸಿನಿಮಾ ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಜಮೀರ್ ಅವರು ಮಗಳ ಮದುವೆಗೆ ಆಹ್ವಾನಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರನ್ನೂ ಮದುವೆಗೆ ಆಹ್ವಾನಿಸಿದ್ದಾರೆ ಜಮೀರ್.

ಬಾಲಿವುಡ್ನಿಂದ ಅತಿಥಿಗಳು ಆಗಮಿಸುವ ನಿರೀಕ್ಷೆ
ಬಾಲಿವುಡ್ನಲ್ಲಿಯೂ ಸಾಕಷ್ಟು ಪರಿಚಯ ಜಮೀರ್ ಅವರಿಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಸಹ ಜಮೀರ್ ಪುತ್ರಿಯ ಮದುವೆಗೆ ಆಗಮಿಸುವ ಸಂಭವ ಇದೆ. ಈ ಹಿಂದೆ ಜಮೀರ್ ಹುಟ್ಟುಹಬ್ಬಕ್ಕೆ ಸಂಜಯ್ ದತ್, ಸೋಹೆಲ್ ಖಾನ್, ಅರ್ಬಾಜ್ ಖಾನ್ ಅವರುಗಳು ಹಾಜರಾಗಿದ್ದರು.

ಜನವರಿ 21 ರಂದು ಮದುವೆ
ಜಮೀರ್ ಅಹ್ಮದ್ ಪುತ್ರಿಯ ವಿವಾಹವು ಜನವರಿ 21 ರಂದು ಭಾರಿ ಅದ್ಧೂರಿಯಾಗಿ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಕೀಯ ನಾಯಕರ, ಸಿನಿಮಾ ಸೆಲೆಬ್ರಿಟಿಗಳ ದಂಡೇ ಅಂದು ಅರಮನೆ ಮೈದಾನದಲ್ಲಿ ನೆರೆಯಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm