ಬ್ರೇಕಿಂಗ್ ನ್ಯೂಸ್
14-01-21 04:15 pm Source: FILMIBEAT Manjunatha C ಸಿನಿಮಾ
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ನಟ ಪುನೀತ್ ರಾಜ್ಕುಮಾರ್ ಮನೆಗೆ ಇಂದು ಭೇಟಿ ನೀಡಿದ್ದರು.
ಜಮೀರ್ ಅಹ್ಮದ್ ಪುತ್ರಿಯ ವಿವಾಹ ಇದೇ ತಿಂಗಳು ನಡೆಯಲಿದ್ದು, ಮದುವೆಗೆ ಆಮಂತ್ರಣ ಪತ್ರಿಕೆ ನೀಡಲು ಜಮೀರ್ ಅಹ್ಮದ್ ಅವರು ತಮ್ಮ ಪುತ್ರನನ್ನೂ ಜೊತೆ ಮಾಡಿಕೊಂಡು ಪುನೀತ್ ರಾಜ್ಕುಮಾರ್ ಸೇರಿ ಹಲವು ಸಿನಿ ತಾರೆಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ಜಮೀರ್ ಅವರು ಪುತ್ರಿಯ ವಿವಾಹಕ್ಕೆ ಜಮೀರ್ ಅನ್ನು ಆಹ್ವಾನಿಸಿದ್ದು, ಪುನೀತ್ ಜೊತೆಯಲ್ಲಿ ಕೆಲ ಕಾಲ ಕಳೆದು ಉಭಯ ಕುಶಲೋಪರಿಯನ್ನು ಸಹ ಮಾಡಿದ್ದಾರೆ. ಪುನೀತ್ ಅವರನ್ನು ಜಮೀರ್ ಮಗಳ ಮದುವೆಗೆ ಆಹ್ವಾನಿಸುತ್ತಿರುವ ಚಿತ್ರಗಳನ್ನು ಜಮೀರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಶ್, ಸುದೀಪ್, ರಾಘಣ್ಣನ ಮನೆಗೆ ಭೇಟಿ
ಪುನೀತ್ ಮನೆಗೆ ಭೇಟಿ ಕೊಟ್ಟ ಬಳಿಕ ನಟರಾದ ಸುದೀಪ್, ಯಶ್ ನಿವಾಸಗಳಿಗೂ ಭೇಟಿ ಕೊಟ್ಟ ಜಮೀರ್ ಹಾಗೂ ಅವರ ಪುತ್ರ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ನಿವಾಸಕ್ಕೂ ಜಮೀರ್ ಭೇಟಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ, ಶಿವರಾಜ್ ಕುಮಾರ್, ದುನಿಯಾ ವಿಜಯ್ ಅವರಿಗೂ ಆಹ್ವಾನ ನೀಡಿದ್ದಾರೆ ಜಮೀರ್.

ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಗೂ ಆಹ್ವಾನ
ಜಮೀರ್ ಅವರು ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡುತ್ತಿದ್ದು, ಹಲವಾರು ರಾಜಕೀಯ ಮುಖಂಡರನ್ನು, ಸಿನಿಮಾ ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಜಮೀರ್ ಅವರು ಮಗಳ ಮದುವೆಗೆ ಆಹ್ವಾನಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರನ್ನೂ ಮದುವೆಗೆ ಆಹ್ವಾನಿಸಿದ್ದಾರೆ ಜಮೀರ್.

ಬಾಲಿವುಡ್ನಿಂದ ಅತಿಥಿಗಳು ಆಗಮಿಸುವ ನಿರೀಕ್ಷೆ
ಬಾಲಿವುಡ್ನಲ್ಲಿಯೂ ಸಾಕಷ್ಟು ಪರಿಚಯ ಜಮೀರ್ ಅವರಿಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಸಹ ಜಮೀರ್ ಪುತ್ರಿಯ ಮದುವೆಗೆ ಆಗಮಿಸುವ ಸಂಭವ ಇದೆ. ಈ ಹಿಂದೆ ಜಮೀರ್ ಹುಟ್ಟುಹಬ್ಬಕ್ಕೆ ಸಂಜಯ್ ದತ್, ಸೋಹೆಲ್ ಖಾನ್, ಅರ್ಬಾಜ್ ಖಾನ್ ಅವರುಗಳು ಹಾಜರಾಗಿದ್ದರು.

ಜನವರಿ 21 ರಂದು ಮದುವೆ
ಜಮೀರ್ ಅಹ್ಮದ್ ಪುತ್ರಿಯ ವಿವಾಹವು ಜನವರಿ 21 ರಂದು ಭಾರಿ ಅದ್ಧೂರಿಯಾಗಿ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಕೀಯ ನಾಯಕರ, ಸಿನಿಮಾ ಸೆಲೆಬ್ರಿಟಿಗಳ ದಂಡೇ ಅಂದು ಅರಮನೆ ಮೈದಾನದಲ್ಲಿ ನೆರೆಯಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm