ಬ್ರೇಕಿಂಗ್ ನ್ಯೂಸ್
14-01-21 04:28 pm Source: FILMIBEAT Bharath Kumar K ಸಿನಿಮಾ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.

ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ. ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm