ಬ್ರೇಕಿಂಗ್ ನ್ಯೂಸ್
14-01-21 04:28 pm Source: FILMIBEAT Bharath Kumar K ಸಿನಿಮಾ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.
ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ. ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.
This News Article is a Copy of FILMIBEAT
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm