ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm