ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm