ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm