ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm