ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm