ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am