ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm