ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm