ಬ್ರೇಕಿಂಗ್ ನ್ಯೂಸ್
20-01-21 12:28 pm Source: FILMIBEAT ಸಿನಿಮಾ
ದಿಯಾ ಸಿನಿಮಾ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರ ಮನ ಗೆದ್ದಿರುವ ನಟ ಪೃಥ್ವಿ ಅಂಬರ್ ಈಗ ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ದಿಯಾ ಸಿನಿಮಾದ ಆದಿ ಪಾತ್ರದ ಮೂಲಕ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿರುವ ಪೃಥ್ವಿ ಸದ್ಯ ಸಾಲು ಸಾಲು ಕನ್ನಡದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಕನ್ನಡ ಸಿನಿಮಾಗಳ ಜೊತೆಗೆ ಹಿಂದಿ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ಪೃಥ್ವಿ ಹಿಂದಿಯಲ್ಲಿ ಮಿಂಚಲು ಸಜ್ಜಾಗಿರುವುದು ದಿಯಾ ಸಿನಿಮಾದ ರಿಮೇಕ್ ನಲ್ಲಿ. ಹೌದು, ಕನ್ನಡದ ಸೂಪರ್ ಹಿಟ್ ದಿಯಾ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗುತ್ತಿದೆ. ಹಿಂದಿ ರಿಮೇಕ್ ನಲ್ಲೂ ಪೃಥ್ವಿ ಆದಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈ ಮೂಲಕ ಪೃಥ್ವಿ ಆದಿಯಾಗಿ ಮತ್ತೆ ಹಿಂದಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ವಿಶೇಷ ಎಂದರೆ ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ನಟ ಪೃಥ್ವಿ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿರುವ ಪೃಥ್ವಿ ಲಕ್ನೋದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ.

ಕೆಎಸ್ ಅಶೋಕ್ ನಿರ್ದೇಶನದ ದಿಯಾ ಸಿನಿಮಾದಲ್ಲಿ ಖುಷಿ ರವಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ದೀಕ್ಷಿತ್ ಶೆಟ್ಟಿ ಮತ್ತು ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು. 2020 ಪ್ರಾರಂಭದಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾಗೆ ಕನ್ನಡ ಚಿತ್ರಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರಮಂದಿರಗಳಲ್ಲಿ ಮಾತ್ರವಲ್ಲದೆ ಒಟಿಟಿಯಲ್ಲಿ ರಿಲೀಸ್ ಆದಾಗಲು ಜನ ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಹಿಂದಿ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗುತ್ತಿದೆ.
ಹಿಂದಿಯಲ್ಲಿ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ, ಮತ್ತೋರ್ವ ನಾಯಕ ಯಾರು ಎನ್ನುವ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ಮೂಲಗಳ ಪ್ರಕಾರ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ದಿಯಾ ಹಿಂದಿ ರಿಮೇಕ್ ಚಿತ್ರೀಕರಣವನ್ನು ಡೆಹರಾಡೂನ್ ಮತ್ತು ಮಸ್ಸೂರಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm