ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm