ಬ್ರೇಕಿಂಗ್ ನ್ಯೂಸ್
25-01-21 02:31 pm Headline Karnataka News Network ಸಿನಿಮಾ
ಬೆಂಗಳೂರು, ಜ.25 : ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಖ್ಯಾತಿ ಗಳಿಸಿದ್ದ ರೂಪದರ್ಶಿ ಮತ್ತು ನಟಿಯಾಗಿದ್ದ ಜಯಶ್ರೀ ರಾಮಯ್ಯ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ವೃದ್ಧಾಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜಯಶ್ರೀ ರಾಮಯ್ಯ ಶವ ಪತ್ತೆಯಾಗಿದೆ. ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ಅವರು ಈ ಹಿಂದೆ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದರು. ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಹಿರಂಗವಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸಂದೇಶ ಹಾಕಿದ್ದು ಇದೆ. ಆದರೆ, ನಂತರ ಸಿನಿಮಾರಂಗದ ಪ್ರಮುಖರು ಜಯಶ್ರೀಗೆ ಸಾಂತ್ವನ ಹೇಳಿದ್ದರು. ಆದರೆ, ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಜಯಶ್ರೀ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಆದರೆ, ಜಯಶ್ರೀ ಅವರು ವೃದ್ಧಾಶ್ರಮಕ್ಕೆ ತೆರಳಿ ದಿಢೀರ್ ಆತ್ಮಹತ್ಯೆಗೆ ಶರಣಾಗಲು ಏನು ಕಾರಣ ಎಂಬುದು ಗೊತ್ತಾಗಿಲ್ಲ. ಆರ್ಥಿಕ ಬಿಕ್ಕಟ್ಟು ಜೊತೆಗೆ ಮಾನಸಿಕ ಸಮಸ್ಯೆ ಎದುರಿಸಿದ್ದ ಜಯಶ್ರೀ ಕಳೆದ ಜುಲೈನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಫೇಸ್ಬುಕ್ ಲೈವ್ ಬಂದಿದ್ದರು. ತಾನಿನ್ನು ಆತ್ಮಹತ್ಯೆ ಮಾಡಿಕೊಳ್ಳಲ್ಲ ಎಂದಿದ್ದರು. ಅದಕ್ಕೂ ಹಿಂದೆ ಫೇಸ್ಬುಕ್ ಲೈವಲ್ಲಿ ಬಂದು ಸಾಯುತ್ತೇನೆ ಎಂದಿದ್ದರು. ತನಗೆ ಮೋಸ ಆಗಿದೆ, ಚಿಕ್ಕ ವಯಸ್ಸಿನಲ್ಲಿ ನನ್ನನ್ನು ಮೋಸ ಮಾಡಿದ್ದಾರೆ. ಅದರಿಂದ ಇನ್ನೂ ಹೊರಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಜಯಶ್ರೀ ಸಾವಿನಿಂದ ಅವರ ಆಪ್ತರು ತುಂಬ ನೊಂದುಕೊಂಡಿದ್ದಾರೆ. ಜಯಶ್ರೀ ಅವರು ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದರು.
Bigg Boss Kannada 3 contestant and actress Jayashree Ramaiah committed suicide at an old age home in Bengaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am