ಬ್ರೇಕಿಂಗ್ ನ್ಯೂಸ್
25-01-21 03:46 pm Source: FILMIBEAT Manjunatha C ಸಿನಿಮಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm