ಬ್ರೇಕಿಂಗ್ ನ್ಯೂಸ್
25-01-21 04:01 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿತು.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೇವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ ಎನ್ನಲಾಗುತ್ತಿದೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ವರುಣ್ ಮತ್ತು ನತಾಶಾ ಮದುವೆ ಶಾಸ್ತ್ರಗಳು ಜೋರಾಗಿ ನಡೆಯುತ್ತಿದೆ. ಆದರೆ ಯಾವುದೇ ಫೋಟೋಗಳು ಮತ್ತು ವಿಡಿಯೋವನ್ನು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಂಡಿದ್ದರು. ನಿನ್ನ ಭಾನುವಾರ ಮದುವೆ ದಿನ ವರುಣ್ ಮತ್ತು ನತಾಶಾ ಜೋಡಿ ಕ್ಯಾಮರಾ ಮುಂದೆ ಹಾಜರಾಗಿದ್ದರು. ಅಲ್ಲದೆ ವರುಣ್ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ, 'ಜೀವನ ಪರ್ಯಂತ ಪ್ರೀತಿಯು ಅಧಿಕೃತವಾಯಿತು' ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ಗಣ್ಯರು ವಿಶ್
ಈ ಸುಂದರ ಜೋಡಿಗೆ, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ನೇಹಾ ದೂಪಿಯಾ, ಶಾಹಿದ್ ಕಪೂರ್, ಕರಿಶ್ಮಾ ಕಪೂರ್ ಸೇರಿದಂತೆ ಬಾಲಿವುಡ್ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ವಿಶ್ ಮಾಡತ್ತಿದ್ದಾರೆ.

ಬಳಿ ಬಣ್ಣದ ಉಡುಪಿನಲ್ಲಿ ನವ ಜೋಡಿ ಮಿಂಚಿಂಗ್
ನಟ ವರುಣ್ ಧವನ್ ನೀಲಿ ಮತ್ತು ಬಿಳಿ ಬಣ್ಣದ ಶೇರ್ವಾನಿ ಧರಿಸಿದ್ದರು. ವರುಣ್ ಪತ್ನಿ ನತಾಶಾ ಬಳಿ ಬಣ್ಣದ ಹೆಚ್ಚು ಎಂಬ್ರಾಯಿಡರಿ ವರ್ಕ್ ಇರುವ ಲೆಹೆಂಗಾದಲ್ಲಿ ಕಂಗೊಳಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಮುಂಚಿತವಾಗಿಯೆ ವರುಣ್ ಮತ್ತು ನತಾಶಾ ಕುಟುಂಬ ಅಲಿಬಾಗ್ ಗೆ ತೆರಳಿದ್ದರು.

ನತಾಶಾ ದಲಾಲ್ ಯಾರು?
ನತಾಶಾ ದಲಾಲ್ ಖ್ಯಾತ ಉದ್ಯಮಿ ರಾಜೇಶ್ ದಲಾಲ್ ಪುತ್ರಿ. ನತಾಶಾ ತಾಯಿ ಗೌರಿ ದಲಾಲ್, ಅವರೂ ಸಹ ಉದ್ಯಮಿ. ನತಾಶಾ ಅವರದ್ದು ಉದ್ಯಮಿಗಳ ಕುಟುಂಬ. ನತಾಶಾ ಸಹ ಸ್ವಂತ ಫ್ಯಾಷನ್ ಬ್ರ್ಯಾಂಡ್ ಅನ್ನು ಹೊಂದಿದ್ದಾರೆ. ಅದರ ಹೆಸರು 'ನತಾಶಾ ದಲಾಲ್ ಲೇಬಲ್'. ನತಾಶಾ ಮತ್ತು ವರುಣ್ ಇಬ್ಬರು ಬಾಲ್ಯದ ಗೆಳೆಯರು. 6ನೇ ತರಗತಿಯಲ್ಲಿ ಪರಿಚಯವಾದ ಇಬ್ಬರು ಈಗ ಪತಿ-ಪತ್ನಿಯಾಗಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm