ಬ್ರೇಕಿಂಗ್ ನ್ಯೂಸ್
25-01-21 04:01 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿತು.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೇವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ ಎನ್ನಲಾಗುತ್ತಿದೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ವರುಣ್ ಮತ್ತು ನತಾಶಾ ಮದುವೆ ಶಾಸ್ತ್ರಗಳು ಜೋರಾಗಿ ನಡೆಯುತ್ತಿದೆ. ಆದರೆ ಯಾವುದೇ ಫೋಟೋಗಳು ಮತ್ತು ವಿಡಿಯೋವನ್ನು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಂಡಿದ್ದರು. ನಿನ್ನ ಭಾನುವಾರ ಮದುವೆ ದಿನ ವರುಣ್ ಮತ್ತು ನತಾಶಾ ಜೋಡಿ ಕ್ಯಾಮರಾ ಮುಂದೆ ಹಾಜರಾಗಿದ್ದರು. ಅಲ್ಲದೆ ವರುಣ್ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ, 'ಜೀವನ ಪರ್ಯಂತ ಪ್ರೀತಿಯು ಅಧಿಕೃತವಾಯಿತು' ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ಗಣ್ಯರು ವಿಶ್
ಈ ಸುಂದರ ಜೋಡಿಗೆ, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ನೇಹಾ ದೂಪಿಯಾ, ಶಾಹಿದ್ ಕಪೂರ್, ಕರಿಶ್ಮಾ ಕಪೂರ್ ಸೇರಿದಂತೆ ಬಾಲಿವುಡ್ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ವಿಶ್ ಮಾಡತ್ತಿದ್ದಾರೆ.

ಬಳಿ ಬಣ್ಣದ ಉಡುಪಿನಲ್ಲಿ ನವ ಜೋಡಿ ಮಿಂಚಿಂಗ್
ನಟ ವರುಣ್ ಧವನ್ ನೀಲಿ ಮತ್ತು ಬಿಳಿ ಬಣ್ಣದ ಶೇರ್ವಾನಿ ಧರಿಸಿದ್ದರು. ವರುಣ್ ಪತ್ನಿ ನತಾಶಾ ಬಳಿ ಬಣ್ಣದ ಹೆಚ್ಚು ಎಂಬ್ರಾಯಿಡರಿ ವರ್ಕ್ ಇರುವ ಲೆಹೆಂಗಾದಲ್ಲಿ ಕಂಗೊಳಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಮುಂಚಿತವಾಗಿಯೆ ವರುಣ್ ಮತ್ತು ನತಾಶಾ ಕುಟುಂಬ ಅಲಿಬಾಗ್ ಗೆ ತೆರಳಿದ್ದರು.

ನತಾಶಾ ದಲಾಲ್ ಯಾರು?
ನತಾಶಾ ದಲಾಲ್ ಖ್ಯಾತ ಉದ್ಯಮಿ ರಾಜೇಶ್ ದಲಾಲ್ ಪುತ್ರಿ. ನತಾಶಾ ತಾಯಿ ಗೌರಿ ದಲಾಲ್, ಅವರೂ ಸಹ ಉದ್ಯಮಿ. ನತಾಶಾ ಅವರದ್ದು ಉದ್ಯಮಿಗಳ ಕುಟುಂಬ. ನತಾಶಾ ಸಹ ಸ್ವಂತ ಫ್ಯಾಷನ್ ಬ್ರ್ಯಾಂಡ್ ಅನ್ನು ಹೊಂದಿದ್ದಾರೆ. ಅದರ ಹೆಸರು 'ನತಾಶಾ ದಲಾಲ್ ಲೇಬಲ್'. ನತಾಶಾ ಮತ್ತು ವರುಣ್ ಇಬ್ಬರು ಬಾಲ್ಯದ ಗೆಳೆಯರು. 6ನೇ ತರಗತಿಯಲ್ಲಿ ಪರಿಚಯವಾದ ಇಬ್ಬರು ಈಗ ಪತಿ-ಪತ್ನಿಯಾಗಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm