ಬ್ರೇಕಿಂಗ್ ನ್ಯೂಸ್
26-01-21 04:38 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿದೆ.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಬಾಲಿವುಡ್ ಗಣ್ಯರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟ ವರುಣ್ ಧವನ್ ಬಗ್ಗೆ ಮಾಡಿರುವ ಶಾಕಿಂಗ್ ಕಾಮೆಂಟ್ ಎಲ್ಲರ ಗಮನ ಸೆಳೆಯುತ್ತಿದೆ.

ವರುಣ್ ಧವನ್ ದಂಪತಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಶ್ರದ್ಧಾ ವ್ಯಂಗ್ಯವಾಡಿದ್ದಾರೆ. ಇನ್ಸ್ಟಾ ಗ್ರಾಮ್ ನಲ್ಲಿ ಬರೆದುಕೊಂಡಿರುವ ಶ್ರದ್ಧಾ 'ಇನ್ನೊಬ್ಬ ಉತ್ತಮ ನಟನ ವೃತ್ತಿ ಬದುಕು ಕೊನೆಯಾಯಿತು. ನಾವು ಮತ್ತೆ ಅವರನ್ನು ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎನ್ನುವ ಬೇಸರವಿದೆ. ಅವರ ಪತ್ನಿ ಮತ್ತು ಅತ್ತೆ ಮನೆಯರು ಬೇರೆ ನಾಯಕಿಯರ ಜೊತೆ ನಟಿಸುವದನ್ನು ಇಷ್ಟಪಡುವುದಿಲ್ಲ' ಎಂದಿದ್ದಾರೆ.

ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತಾರಾ?
'ಬಹುಶಃ ಅವರು ಇನ್ಮುಂದೆ ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡಲು ಬದಲಾಗುತ್ತಾರೆಯೇ? ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನವನ್ನು ಹೇಗೆ ನಿಭಾಯಿಸಿಕೊಂಡು ಹೋಗುತ್ತಾರೆ. ತುಂಬಾ ಕಷ್ಟ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಭಿನಂದನೆಗಳು ವರುಣ್ ಧವನ್' ಎಂದು ವ್ಯಂಗ್ಯ ವಾಡಿದ್ದಾರೆ.

ಪುರುಷ ಪ್ರಧಾನ ವ್ಯಸ್ಥೆಯನ್ನು ಅಣಕಿಸಿದ ಶ್ರದ್ಧಾ
ಮದುವೆಯ ಬಳಿಕ ನಟಿಮಣಿಯರಿಗೆ ಎದುರಾಗುವ ಪ್ರಶ್ನೆಗಳನ್ನು ವರುಣ್ ಧವನ್ ಗೆ ಹೇಳುವ ಮೂಲಕ ಪುರುಷ ಪ್ರಧಾನ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ನಟಿಯರು ಮದುವೆಯಾದ ಬಳಿಕ ವೃತ್ತಿ ಜೀವನ ಕೊನೆೆಯಾಯಿತು, ಗಂಡನ ಮನೆಯವರ ಅನುಮತಿ ಪಡೆಯಬೇಕು ಎನ್ನುವ ಮಾತುಗಳು ಬರುತ್ತಿವೆ. ಹಾಗಾಗಿ ವರುಣ್ ಧವನ್ ಮದುವೆಯನ್ನು ಶ್ರದ್ಧಾ ವ್ಯಂಗ್ಯವಾಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm