ಬ್ರೇಕಿಂಗ್ ನ್ಯೂಸ್
26-01-21 04:38 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿದೆ.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಬಾಲಿವುಡ್ ಗಣ್ಯರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟ ವರುಣ್ ಧವನ್ ಬಗ್ಗೆ ಮಾಡಿರುವ ಶಾಕಿಂಗ್ ಕಾಮೆಂಟ್ ಎಲ್ಲರ ಗಮನ ಸೆಳೆಯುತ್ತಿದೆ.

ವರುಣ್ ಧವನ್ ದಂಪತಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಶ್ರದ್ಧಾ ವ್ಯಂಗ್ಯವಾಡಿದ್ದಾರೆ. ಇನ್ಸ್ಟಾ ಗ್ರಾಮ್ ನಲ್ಲಿ ಬರೆದುಕೊಂಡಿರುವ ಶ್ರದ್ಧಾ 'ಇನ್ನೊಬ್ಬ ಉತ್ತಮ ನಟನ ವೃತ್ತಿ ಬದುಕು ಕೊನೆಯಾಯಿತು. ನಾವು ಮತ್ತೆ ಅವರನ್ನು ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎನ್ನುವ ಬೇಸರವಿದೆ. ಅವರ ಪತ್ನಿ ಮತ್ತು ಅತ್ತೆ ಮನೆಯರು ಬೇರೆ ನಾಯಕಿಯರ ಜೊತೆ ನಟಿಸುವದನ್ನು ಇಷ್ಟಪಡುವುದಿಲ್ಲ' ಎಂದಿದ್ದಾರೆ.

ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತಾರಾ?
'ಬಹುಶಃ ಅವರು ಇನ್ಮುಂದೆ ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡಲು ಬದಲಾಗುತ್ತಾರೆಯೇ? ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನವನ್ನು ಹೇಗೆ ನಿಭಾಯಿಸಿಕೊಂಡು ಹೋಗುತ್ತಾರೆ. ತುಂಬಾ ಕಷ್ಟ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಭಿನಂದನೆಗಳು ವರುಣ್ ಧವನ್' ಎಂದು ವ್ಯಂಗ್ಯ ವಾಡಿದ್ದಾರೆ.

ಪುರುಷ ಪ್ರಧಾನ ವ್ಯಸ್ಥೆಯನ್ನು ಅಣಕಿಸಿದ ಶ್ರದ್ಧಾ
ಮದುವೆಯ ಬಳಿಕ ನಟಿಮಣಿಯರಿಗೆ ಎದುರಾಗುವ ಪ್ರಶ್ನೆಗಳನ್ನು ವರುಣ್ ಧವನ್ ಗೆ ಹೇಳುವ ಮೂಲಕ ಪುರುಷ ಪ್ರಧಾನ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ನಟಿಯರು ಮದುವೆಯಾದ ಬಳಿಕ ವೃತ್ತಿ ಜೀವನ ಕೊನೆೆಯಾಯಿತು, ಗಂಡನ ಮನೆಯವರ ಅನುಮತಿ ಪಡೆಯಬೇಕು ಎನ್ನುವ ಮಾತುಗಳು ಬರುತ್ತಿವೆ. ಹಾಗಾಗಿ ವರುಣ್ ಧವನ್ ಮದುವೆಯನ್ನು ಶ್ರದ್ಧಾ ವ್ಯಂಗ್ಯವಾಡಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm