ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm