ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm