ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm