ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm