ಬ್ರೇಕಿಂಗ್ ನ್ಯೂಸ್
28-01-21 12:33 pm Source: FILMIBEAT Murulidhara ಸಿನಿಮಾ
ಬೆಂಗಳೂರು, ಜನವರಿ 28: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ಸಿಸಿಬಿ ಬುಲಾವ್ ನೀಡಿದೆ. ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಮುಂದೆ ಹಾಜರಾಗಲು ಸೂಚಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಪೊಲೀಸ್ ಅಯುಕ್ತರ ಕಚೇರಿಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಎರಡು ಬಾರಿ ಸಿಸಿಬಿ ಪೊಲೀಸರ ಕಚೇರಿಗೆ ಭೇಟಿ ನೀಡಿ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಇಂಧ್ರಜಿತ್ ಲಂಕೇಶ್ ಮಾಹಿತಿ ನೀಡಿದ್ದರು. 2020 ಅಗಸ್ಟ್ 21 ಹಾಗೂ ಸೆಪ್ಟಂಬರ್ 2 ರಂದು ಎರಡು ಬಾರಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದರು. ಡ್ರಗ್ ಪಾರ್ಟಿಯ ಚಿತ್ರಗಳಿದ್ದ ಪೆನ್ ಡ್ರೈವ್ ಸಿಸಿಬಿ ಪೊಲೀಸರಿಗೆ ನೀಡಿದ್ದರು. ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ನೀಡಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಹಳೇ ಪ್ರಕರಣ ಮರು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಆರ್ ಟಿಓ ಅಧಕಾರಿ ರವಿಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ ನಟಿ ಐಂದ್ರಿತಾ ರೈ, ದಿಗಂತ್, ರಾಗಿಣಿ, ಸಂಜನಾ ಗಲ್ರಾಣಿ ಸೇರಿದಂತೆ ಸ್ಯಾಂಡಲ್ ವುಡ್ ನಟ- ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ನಟಿ ಸಂಜನಾ , ರಾಗಿಣಿ ಬಂಧನಕ್ಕೆ ಒಳಗಾಗಿದ್ದರು. ಆದಿತ್ವ ಆಳ್ವಾ ಕೂಡ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ. ಇನ್ನು ಡ್ರಗ್ ಡೀಲಿಂಗ್ ಕಿಂಗ್ ಪಿನ್ ಗಳಾದ ವೀರೇನ್ ಖನ್ನಾ, ರಾಹುಲ್ ತೋನ್ಸೆ, ಶಿವಪ್ರಕಾಶ್ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಅವರ ಮುಂದೆ ಇಂದ್ರಜಿತ್ ಹಾಜರಾಗಲಿದ್ದು, ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿಬಿ ಪೊಲೀಸರು ವಿಚಾರಣೆಗೆ ಬರುವಂತೆ ಕರೆದಿರುವುದು ನಿಜ. ನಾನು ಸಿಸಿಬಿ ಡಿಸಿಪಿ ಯವರನ್ನು ಭೇಟಿ ಮಾಡಲಿದ್ದೇನೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ ಬಳಿಕವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm