ಬ್ರೇಕಿಂಗ್ ನ್ಯೂಸ್
31-01-21 09:12 pm Headline Karnataka News Network ಸಿನಿಮಾ
ಚೆನ್ನೈ, ಜನವರಿ 31: ಇಲ್ಲಿನ ಎಗ್ಮೋರ್ ಮೆಟ್ರೋಪಾಲಿಟನ್ ಕೋರ್ಟ್ II ನಿಂದ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಶಂಕರ್ ಅವರ ಮೇಲೆ ಕೃತಿಚೌರ್ಯ ಆರೋಪ ಹೊರೆಸಲಾಗಿದೆ. 2010 ರಲ್ಲಿ ಶಂಕರ್ ನಿರ್ದೇಶನದಲ್ಲಿ ತೆರೆಕಂಡ ಎಂದಿರನ್ ಅಲಿಯಾಸ್ ರೋಬೋ ಚಿತ್ರ ಸೂಪರ್ ಹಿಟ್ ಆಗಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ನಟನೆಯ ಈ ಚಿತ್ರಕ್ಕೆ ಸಂಬಂಧಿಸಿದಂತೆ ಕಥೆ ಕದ್ದ ಆರೋಪದ ಕೇಸ್ 11ನೇ ವರ್ಷಕ್ಕೆ ಕಾಲಿಟ್ಟಿದೆ.

ಆರೂರು ತಮಿಳ್ನಾದನ್ ಎಂಬ ವ್ಯಕ್ತಿ ನಿರ್ದೇಶಕ ಶಂಕರ್ ಮೇಲೆ ಕತೆ ಕದ್ದ ಆರೋಪ ಮಾಡಿದ್ದಾರೆ. ಜಿಗುಬಾ ಎಂಬ ಹೆಸರಿನಲ್ಲಿ ತಾವು ಬರೆದ ಕತೆಯನ್ನು ಶಂಕರ್ ಹಾಗೆ ಭಟ್ಟಿ ಇಳಿಸಿದ್ದಾರೆ. ಈ ಬಗ್ಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದರು. 1996 ಹಾಗೂ 2007 ರಲ್ಲಿ ಬೇರೆ ಹೆಸರಿನಲ್ಲಿ ಜಿಗುಬಾ ಕಥೆ ತಮಿಳು ಮ್ಯಾಗಜಿನ್ಗಳಲ್ಲಿ ಪ್ರಕಟವಾಗಿದೆ, 1957ರ ಕೃತಿಹಕ್ಕು ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಎಂದು ಅರೂರು ಪರ ವಕೀಲರು ಕೋರ್ಟಿಗೆ ಸಾಕ್ಷ್ಯ ಒದಗಿಸಿದ್ದರು.
ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಶಂಕರ್ ಅವರಿಗೆ ಅನೇಕ ಬಾರಿ ಸಮನ್ಸ್ ಕಳಿಸಿದ್ದರೂ ಹಾಜರಾಗದ ಕಾರಣ, ಮೆಟ್ರೋಪಾಲಿಟನ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ. ತಮಿಳ್ನಾದನ್ ಆರೋಪನ್ನು ಅಲ್ಲಗಳೆದಿದ್ದ ಶಂಕರ್ ಅವರು ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತಗೊಂಡಿತ್ತು.
The Metropolitan Magistrate Court-II, Egmore, has issued a non-bailable warrant (NBW) against film director Shankar for allegedly copying a short story of writer Arur Tamilnadan and making the blockbuster movie Endhiran, featuring Rajinikanth, Aishwarya Rai and others.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am