ಬ್ರೇಕಿಂಗ್ ನ್ಯೂಸ್
31-01-21 09:12 pm Headline Karnataka News Network ಸಿನಿಮಾ
ಚೆನ್ನೈ, ಜನವರಿ 31: ಇಲ್ಲಿನ ಎಗ್ಮೋರ್ ಮೆಟ್ರೋಪಾಲಿಟನ್ ಕೋರ್ಟ್ II ನಿಂದ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಶಂಕರ್ ಅವರ ಮೇಲೆ ಕೃತಿಚೌರ್ಯ ಆರೋಪ ಹೊರೆಸಲಾಗಿದೆ. 2010 ರಲ್ಲಿ ಶಂಕರ್ ನಿರ್ದೇಶನದಲ್ಲಿ ತೆರೆಕಂಡ ಎಂದಿರನ್ ಅಲಿಯಾಸ್ ರೋಬೋ ಚಿತ್ರ ಸೂಪರ್ ಹಿಟ್ ಆಗಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ನಟನೆಯ ಈ ಚಿತ್ರಕ್ಕೆ ಸಂಬಂಧಿಸಿದಂತೆ ಕಥೆ ಕದ್ದ ಆರೋಪದ ಕೇಸ್ 11ನೇ ವರ್ಷಕ್ಕೆ ಕಾಲಿಟ್ಟಿದೆ.

ಆರೂರು ತಮಿಳ್ನಾದನ್ ಎಂಬ ವ್ಯಕ್ತಿ ನಿರ್ದೇಶಕ ಶಂಕರ್ ಮೇಲೆ ಕತೆ ಕದ್ದ ಆರೋಪ ಮಾಡಿದ್ದಾರೆ. ಜಿಗುಬಾ ಎಂಬ ಹೆಸರಿನಲ್ಲಿ ತಾವು ಬರೆದ ಕತೆಯನ್ನು ಶಂಕರ್ ಹಾಗೆ ಭಟ್ಟಿ ಇಳಿಸಿದ್ದಾರೆ. ಈ ಬಗ್ಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದರು. 1996 ಹಾಗೂ 2007 ರಲ್ಲಿ ಬೇರೆ ಹೆಸರಿನಲ್ಲಿ ಜಿಗುಬಾ ಕಥೆ ತಮಿಳು ಮ್ಯಾಗಜಿನ್ಗಳಲ್ಲಿ ಪ್ರಕಟವಾಗಿದೆ, 1957ರ ಕೃತಿಹಕ್ಕು ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಎಂದು ಅರೂರು ಪರ ವಕೀಲರು ಕೋರ್ಟಿಗೆ ಸಾಕ್ಷ್ಯ ಒದಗಿಸಿದ್ದರು.
ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಶಂಕರ್ ಅವರಿಗೆ ಅನೇಕ ಬಾರಿ ಸಮನ್ಸ್ ಕಳಿಸಿದ್ದರೂ ಹಾಜರಾಗದ ಕಾರಣ, ಮೆಟ್ರೋಪಾಲಿಟನ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ. ತಮಿಳ್ನಾದನ್ ಆರೋಪನ್ನು ಅಲ್ಲಗಳೆದಿದ್ದ ಶಂಕರ್ ಅವರು ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತಗೊಂಡಿತ್ತು.
The Metropolitan Magistrate Court-II, Egmore, has issued a non-bailable warrant (NBW) against film director Shankar for allegedly copying a short story of writer Arur Tamilnadan and making the blockbuster movie Endhiran, featuring Rajinikanth, Aishwarya Rai and others.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm