ಬ್ರೇಕಿಂಗ್ ನ್ಯೂಸ್
01-02-21 12:30 pm Source: FILMIBEAT ಸಿನಿಮಾ
ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm