ಬ್ರೇಕಿಂಗ್ ನ್ಯೂಸ್
01-02-21 05:04 pm Source: FILMIBEAT Bharath Kumar K ಸಿನಿಮಾ
ಕೊರೊನಾದಿಂದ ತೀವ್ರ ಸಂಕಷ್ಟದಲ್ಲಿದ್ದ ಚಿತ್ರೋಧ್ಯಮಕ್ಕೆ ಕೇಂದ್ರ ಬಜೆಟ್ನಲ್ಲಿ ಏನಾದರೂ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಘೋಷಣೆ ಮಾಡಿದ ಬಜೆಟ್ ಸಿನಿ ಇಂಡಸ್ಟ್ರಿಗೆ ನಿರಾಸೆ ಮೂಡಿಸಿದೆ.
ಕೊರೊನಾ ವೈರಸ್ ಸಮಯದಲ್ಲಿ ಇಡೀ ಚಿತ್ರೋಧ್ಯಮ ಸಂಕಷ್ಟ ಎದುರಿಸಿದೆ. ಚಿತ್ರಮಂದಿರಗಳು ಮುಚ್ಚಿದ್ದರ ಪರಿಣಾಮ ಕಾರ್ಮಿಕರೆಲ್ಲವೂ ಸಂಕಷ್ಟದಲ್ಲಿದ್ದರು. ಕೇಂದ್ರ ಹಾಗೂ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾವತಿಸುವ ಉದ್ಯಮಗಳಲ್ಲಿ ಒಂದಾಗಿರುವ ಸಿನಿ ಇಂಡಸ್ಟ್ರಿಯನ್ನು ಪರಿಗಣಿಸದೆ ಇರುವುದು ತೀರಾ ಬೇಸರ ತರಿಸಿದೆ ಎಂದು ಚಿತ್ರೋಧ್ಯಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಿಂದಿ ಚಲನಚಿತ್ರ ಪ್ರದರ್ಶಕ ಅಕ್ಷಯ್ ರತಿ ಈ ಕುರಿತು ಪಿಂಕ್ವಿಲ್ಲಾಗೆ ಪ್ರತಿಕ್ರಿಯಿಸಿದ್ದು, "ಬಜೆಟ್ನಲ್ಲಿ ಮನರಂಜನಾ ಕ್ಷೇತ್ರದ ಬಗ್ಗೆ ಯಾವುದೇ ಉಲ್ಲೇಖ ಮಾಡದಿರುವುದು ದುರದೃಷ್ಟ. ಕನಿಷ್ಠ ಹೆಚ್ಚುವರಿ ಹೊರೆಗಳಿಲ್ಲ ಎನ್ನುವುದು ಸಮಾಧಾನ ಅಷ್ಟೇ. ಸಾಂಕ್ರಾಮಿಕ ರೋಗ ಪರಿಣಾಮ ಹೆಚ್ಚು ಸಂಕಷ್ಟಕ್ಕೆ ಸಿಲುಕಿದೆ ಕ್ಷೇತ್ರ
ನಿರ್ಮಾಪಕ ಟಿಪಿ ಅಗರ್ವಾಲ್ ಮಾತನಾಡಿ ''ನಾವು ಸರ್ಕಾರದಿಂದ ಹೆಚ್ಚು ನಿರೀಕ್ಷೆ ಹೊಂದಿರಲಿಲ್ಲ. ನಮಗೆ ಯಾವುದೇ ಸಾಲ ದೊರೆಯುವುದಿಲ್ಲ. ಒಂದು ವೇಳೆ ಸಾಲ ಬೇಕು ಅಂದ್ರೆ ನಮ್ಮ ಆಸ್ತಿಯನ್ನು ಅಡಮಾನ ಇಡಬೇಕು. ನಾವು ನಿರ್ಮಿಸುವ ಸಿನಿಮಾವನ್ನು ಅಡಮಾನ ಇಡಲು ಸಾಧ್ಯವಿಲ್ಲ. ಆದರೆ, ಜಿಎಸ್ಟಿ ಮತ್ತು ತೆರಿಗೆಯಲ್ಲಿ ಸ್ವಲ್ಪ ಕಡಿತ ಎದುರು ನೋಡುತ್ತಿದ್ದೇವು'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೊರೊನಾ ಆರ್ಥಿಕ ಪ್ಯಾಕೇಜ್ನಲ್ಲೂ ಸಿನಿಮಾ ರಂಗಕ್ಕೆ ವಿಶೇಷವಾಗಿ ಯಾವುದೇ ಯೋಜನೆ ಘೋಷಿಸಿರಲಿಲ್ಲ. ಕೇಂದ್ರ ಬಜೆಟ್ ಮೇಲೆ ಯಾವುದೇ ನಿರೀಕ್ಷೆ ಇಲ್ಲದಿದ್ದರೂ ಕೊರೊನಾ ಕಾರಣದಿಂದ ಈ ಸಲ ಏನಾದರೂ ಸಹಾಯ ಸಿಗಬಹುದು ಎಂದು ಕಾದಿದ್ದರು.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm