ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm