ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm