ಬ್ರೇಕಿಂಗ್ ನ್ಯೂಸ್
02-02-21 02:24 pm Source: FILMIBEAT Shruthi Gk ಸಿನಿಮಾ
ಕಥೆ ಕದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಚೆನ್ನೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶಂಕರ್ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಐಶ್ವರ್ಯ ರೈ ನಟನೆಯ ಎಂದಿರನ್ ಸಿನಿಮಾದ ಕಥೆ ಕಳ್ಳತನದ ಪ್ರಕರಣದಲ್ಲಿ ಶಂಕರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಶಂಕರ್ ವಿರುದ್ಧ ವಾರೆಂಟ್ ಜಾರಿಯಾಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಶಂಕರ್, 'ಈ ಸುದ್ದಿ ನೋಡಿ ಆಘಾತವಾಗಿದೆ. ನಮ್ಮ ವಕೀಲರು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಜಾಮೀನು ರಹಿತ ವಾರೆಂಟ್ ಬಂದಿಲ್ಲ. ಇದು ವದಂತಿ ಅಷ್ಟೆ. ಆನ್ ಲೈನ್ ನ್ಯಾಯಾಲಯದ ವರದಿಯ ದೋಷದಿಂದ ಹಾಗಾಗಿರಬಹುದು. ಈಗ ಸರಿಪಡಿಸಲಾಗಿದೆ. ಯಾವುದೇ ಪರಿಶೀಲನೆ ಮಾಡದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದು ಬೇಸರ ತಂದಿದೆ. ಇದು ನಮ್ಮ ಕುಟುಂಬ ಮತ್ತು ಹಿತೈಶಿಗಳಿಗೂ ನೋವುಂಟು ಮಾಡಿದೆ' ಎಂದು ಹೇಳಿದ್ದಾರೆ. ಎಂದಿರನ್ ಸಿನಿಮಾ 2010ರಲ್ಲಿ ತೆರೆಗೆ ಬಂದಿದೆ.
ಈ ಸಿನಿಮಾ ರಿಲೀಸ್ ಆದ ಸಮಯದಲ್ಲಿ ಶಾರ್ಟ್ ಸ್ಟೋರಿ ಬರಹಗಾರ ತಮಿಳುನಾಡನ್ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದರು. ಶಂಕರ್, ತನ್ನ ಕಥೆ 'ಜಿಗುಬಾ' ಎನ್ನುವ ಕಥೆಯನ್ನು ಕದ್ದಿರುವುದಾಗಿ ಆರೋಪಿಸಿದ್ದರು. ಈ ಕಥೆ ತಮಿಳು ನಿಯತಕಾಲಿಕೆ ಪ್ರಕರಟವಾಗಿದ್ದಲ್ಲದೆ, ಕಾದಂಬರಿಯಾಗಿಯೂ ಪ್ರಕಟಿಸಲಾಗಿದೆ ಎಂದು ತಮಿಳುನಾಡನ್ ಉಲ್ಲೇಖಿಸಿದ್ದಾರೆ
ತನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದೆ. ಸಿನಿಮಾ ಕೋಟಿ ಕೋಟಿ ಗಳಿಸಿದೆ. ಆದರೆ ಇದು ನನ್ನ ಆಲೋಚನೆ ಎಂದು ದೂರಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾದರೂ, ಶಂಕರ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎನ್ನುವ ಸುದ್ದಿ ಹರಿದಾಡಿತ್ತು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm