ಬ್ರೇಕಿಂಗ್ ನ್ಯೂಸ್
03-02-21 04:42 pm Source: FILMIBEAT ಸಿನಿಮಾ
'ಮನರಂಜನೆ ಬಹಳ ಮುಖ್ಯ, ಆದರೆ ಮನರಂಜನೆಗಿಂತ ಜನರ ಆರೋಗ್ಯ, ಕ್ಷೇಮ ಮುಖ್ಯ, ಹಾಗಾಗಿ, ಚಿತ್ರಮಂದಿರಗಳಿಗೆ ಸದ್ಯಕ್ಕೆ ನೂರರಷ್ಟು ಅವಕಾಶ ಕೊಡುವುದು ಸೂಕ್ತವಲ್ಲ'' ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಫೆಬ್ರವರಿ 1 ರಿಂದ ದೇಶಾದ್ಯಂತ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಕರ್ನಾಟಕದ ಸರ್ಕಾರ ಈ ಆದೇಶಕ್ಕೆ ತಡೆ ನೀಡಿದ್ದು, ಈ ತಿಂಗಳ ಅಂತ್ಯದವರೆಗೂ ಯಥಾಸ್ಥಿತಿಯಲ್ಲಿ ಚಿತ್ರಮಂದಿರಗಳು ಕಾರ್ಯನಿರ್ವಹಿಸಲಿ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ, ದುನಿಯಾ ವಿಜಯ್, ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಶಿವಣ್ಣ ಸೇರಿದಂತೆ ಹಲವರು ''ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ಕೊಡಿ'' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಕುರಿತು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಸಭೆಯೂ ಸರಿ ಅಂತ ನಾನು ಹೇಳಲ್ಲ
ರಾಜಕೀಯ ಸಭೆ ನಡೆಯುತ್ತೆ, ಮಾರ್ಕೆಟ್ನಲ್ಲಿ ಜನ ಸೇರ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್ ''ರಾಜಕಾರಣದ ಸಭೆ ಸರಿ ಅಂತ ನಾವು ಹೇಳಿಲ್ಲ. ಅದೂ ಸರಿ ಅಂತನೂ ಹೇಳಲ್ಲ. ಆದ್ರೆ ಅದು ಹೊರಗಡೆ ಮಾಡ್ತಿದ್ದಾರೆ, ಹೊರಗಡೆ ಆದರೂ ಅದು ಸರಿಯಲ್ಲ. ಸಾಧ್ಯವಾದ ಕಡೆ ಸೋಂಕು ನಿಯಂತ್ರಣ ಮಾಡೋದು ನಮ್ಮ ಸರ್ಕಾರದ ಜವಾಬ್ದಾರಿ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿದೆ
''ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ಹೆಚ್ಚಿನ ಅವಕಾಶ ನೀಡಲು ಆಯಾ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಸೂಚಿಸಿದೆ. ನಮ್ಮ ತಾಂತ್ರಿಕ ಸಲಹಾ ಸಮಿತಿ ಸಲಹೆ ಪ್ರಕಾರ ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿ ಎಂದು ಹೇಳಿದ್ದೇವೆ. ನೆರೆಯ ಕೇರಳದಲ್ಲಿ ಪ್ರತೀ ದಿನ 5 ಸಾವಿರ ಕೇಸ್ ದಾಖಲಾಗುತ್ತಿದೆ. ಮನರಂಜನೆ ಬಹಳ ಮುಖ್ಯ, ಮನರಂಜನೆಗಿಂತ ಮುಖ್ಯ ಜನರ ಆರೋಗ್ಯ, ಕ್ಷೇಮ'' ಎಂದು ಸುಧಾಕರ್ ಹೇಳಿದರು.
ಮತ್ತೊಮ್ಮೆ ಸಭೆ ಮಾಡ್ತೇನೆ
''ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಸಾಧ್ಯವಾಗಲ್ಲ. ಮತ್ತೊಮ್ಮೆ ಸಿಎಂ ಮತ್ತು ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ'' ಎಂದು ಕೊನೆಯಲ್ಲಿ ಭರವಸೆ ನೀಡಿದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm