ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm