ಬ್ರೇಕಿಂಗ್ ನ್ಯೂಸ್
04-02-21 12:57 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಟೀಸರ್ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಕಂಡಿತ್ತು.
ವಿಶ್ವ ವಿಖ್ಯಾತ ಕಟ್ಟಡದ ಮೇಲೆ ಆರಡಿ ಕಟೌಟ್ ನ ಆರ್ಬಟ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದರು. ವಿಕ್ರಾಂತ್ ರೋಣ ಬೆನ್ನಲ್ಲೇ ಇದೀಗ ಸುದೀಪ್ ಕೋಟಿಗೊಬ್ಬನ ದರ್ಶನ ಮಾಡಿಸಲು ಸಜ್ಜಾಗಿದ್ದಾರೆ. ಹೌದು, ಕಿಚ್ಚ ನಟನೆಯ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿನಿಮಾ ರಿಲೀಸ್ ಗೂ ಮೊದಲು ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಕೋಟಿಗೊಬ್ಬ-3 ಚಿತ್ರದ ಹಾಡುಗಳನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎನ್ನುವುದು ತಂಡದ ಪ್ಲಾನ್. ಅದರಂತೆ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಮೂಲಗಳ ಪ್ರಕಾರ ಕೋಟಿಗೊಬ್ಬ-3 ಸಿನಿಮಾದ ಹಾಡುಗಳು ಮಾರ್ಚ್ 28ರಂದು ಬಿಡುಗಡೆಗೆ ಆಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುತ್ತಿದೆ. ಯಾರೆಲ್ಲ ಗೆಸ್ಟ್ ಭಾಗಿಯಾಗಲಿದ್ದಾರೆ, ಚಿತ್ರದ ಹಾಡುಗಳು ಯಾರಿಂದ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಣ್ಣದ ಲೋಕದಲ್ಲಿ 25 ವರ್ಷ ಪೂರೈಸಿರುವ ಸುದೀಪ್, ಈ ಸಂಭ್ರಮವನ್ನು ದುಬೈನಲ್ಲಿ ಆಚರಿಸಿದ್ದಾರೆ. ಸದ್ಯ ದುಬೈನಿಂದ ವಾಪಸ್ ಆಗಿರುವ ಕಿಚ್ಚ ಕೋಟಿಗೊಬ್ಬ-3 ಪ್ರಮೋಷನ್ ನಲ್ಲಿ ಭಾಗಿಯಾಗಲಿದ್ದಾರೆ. ಕೋಟಿಗೊಬ್ಬ 3ನೇ ಸರಣಿಗೆ ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಕಿಚ್ಚ ಸುದೀಪ್ ಜೊತೆ ನಾಯಕಿಯಾಗಿ ಮಲಯಾಳಂ ಸುಂದರಿ ಮಡೊನ್ನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಇನ್ನು ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ರವಿಶಂಕರ್ ಸೇರಿದಂತೆ ಅನೇಕರಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am