ಬ್ರೇಕಿಂಗ್ ನ್ಯೂಸ್
04-02-21 02:27 pm Source: FILMIBEAT ಸಿನಿಮಾ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಕುರಿತು ವರದಿ ನೀಡುವಂತೆ ಸಿಬಿಐಗೆ ನಿರ್ದೇಶನ ಮಾಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಕೀಲ ಪುನೀತ್ ಕೌರ್ ಥಂಡಾ ಎಂಬುವವರು ಸುಪ್ರೀಂಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಸಿದ್ದರು. ''ಸುಶಾಂತ್ ಸಾವಿನ ಪ್ರಕರಣದ ತನಿಖೆ ಆರಂಭಿಸಿ ಸುಮಾರು ಐದು ತಿಂಗಳು ಕಳೆದುಹೋಗಿದೆ. ಈ ಪ್ರಕರಣದಲ್ಲಿ ಸಿಬಿಐ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನೆರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಮತ್ತು ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸುವಂತೆ'' ಮನವಿ ಮಾಡಿಕೊಂಡಿದ್ದರು.
ಬುಧವಾರ ಈ ಅರ್ಜಿ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಇಂತಹ ಅರ್ಜಿಗಳನ್ನು ನಾವು ಪ್ರೋತ್ಸಾಹಿಸುವುದಿಲ್ಲ, ನೀವು ಬೇಕಾದರೆ ಹೈಕೋರ್ಟ್ಗೆ ಹೋಗಿ ಎಂದು ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿದಸ್ಯ ಪೀಠ, "ನಾವು ಈ ಅರ್ಜಿಯನ್ನು ಪ್ರೋತ್ಸಾಹಿಸಲು ಹೋಗುವುದಿಲ್ಲ, ನೀವು ಹೈಕೋರ್ಟ್ಗೆ ಹೋಗಿ" ಎಂದು ಮನವಿಯನ್ನು ವಜಾಗೊಳಿಸಿದೆ. ಅಂದ್ಹಾಗೆ, ಆಗಸ್ಟ್ 2020 ರಲ್ಲಿ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದಕ್ಕೂ ಮೊದಲು ಈ ಪ್ರಕರಣವನ್ನು ಮುಂಬೈ ಪೊಲೀಸರು ತನಿಖೆ ನಡೆಸಿದರು.
ಒಂದು ಹಂತದಲ್ಲಿ ಸಿಬಿಐ ಸಂಸ್ಥೆ ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿದೆ. ಸದ್ಯದಲ್ಲೇ ನ್ಯಾಯಾಲಯಕ್ಕೆ ಈ ವರದಿ ಸಲ್ಲಿಸಿದೆ ಎಂದು ಹೇಳಲಾಯಿತು. ಆದರೆ, ಇದುವರೆಗೂ ಸಿಬಿಐ ಈ ಕುರಿತು ಸ್ಪಷ್ಟನೆ ನೀಡಿಲ್ಲ. ಜುಲೈ 14, 2020ರಂದು ನಟ ಸುಶಾಂತ್ ಮುಂಬೈನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm