ಬ್ರೇಕಿಂಗ್ ನ್ಯೂಸ್
05-02-21 01:24 pm Source: FILMIBEAT Shruthi Gk ಸಿನಿಮಾ
ಕನ್ನಡ ಚಿತ್ರರಂಗದ ಹಿರಿಯ ನಟಿ ಮಹಾಲಕ್ಷ್ಮಿ 3 ದಶಕಗಳ ಬಳಿಕ ಮತ್ತೆ ಕನ್ನಡ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. 1980-90ರ ದಶಕದಲ್ಲಿ ಚಿತ್ರರಂಗವನ್ನಾಳಿದ ನಟಿ ಮಹಾಲಕ್ಷ್ಮಿ ದಿಢೀರನೆ ಬಣ್ಣದ ಲೋಕದಿಂದ ಮಾಯವಾಗಿದ್ದರು. ಅದ್ಭುತ ಅಭಿನಯದ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರನ್ನು ರಂಜಿಸಿ, ಹೇಳದೆ ಕೇಳದೆ ಮಾಯವಾಗಿದ್ದ ಮಹಾಲಕ್ಷ್ಮಿ ಈಗ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಆಗಿರುವುದು ಕನ್ನಡ ಚಿತ್ರಾಭಿಮಾನಿಗಳಿಗೆ ಸಂತಸ ತಂದಿದೆ. ಮಹಾಲಕ್ಷ್ಮಿ ಎಲ್ಲಿದ್ದರು? ಏನ್ಮಾಡುತ್ತಿದ್ದರು? ಎನ್ನುವ ಪ್ರಶ್ನೆ ಚಿತ್ರಪ್ರೇಕ್ಷಕರನ್ನು 30 ವರ್ಷಗಳಿಂದ ಕಾಡಿತ್ತು. ಆದರೆ ಈ ಎಲ್ಲಾ ಪ್ರಶ್ನೆಗೆ ಉತ್ತರದೊಂದಿಗೆ ಮಹಾಲಕ್ಷ್ಮಿ 2019ರಲ್ಲಿ ಪ್ರತ್ಯಕ್ಷರಾಗಿ ಅಚ್ಚರಿ ಮೂಡಿಸಿದ್ದರು. 2019ರಲ್ಲಿ ಫಿಲ್ಮಿ ಬೀಟ್ ಕನ್ನಡಕ್ಕೆ ನೀಡಿದ ಎಕ್ಸಕ್ಲೂಸಿವ್ ಸಂದರ್ಶನದಲ್ಲಿ 30 ವರ್ಷದ ನಿಗೂಢ ಪಯಣದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದರು
2019ರಲ್ಲಿ ಫಿಲ್ಮಿ ಬೀಟ್ ಕನ್ನಡದ ಜೊತೆ ಮಾತನಾಡಿದ್ದ ಮಹಾಲಕ್ಷ್ಮಿ
'ನಾನು ತುಂಬ ತುಂಬಾ ಚೆನ್ನಾಗಿ ಇದ್ದೀನಿ. ನನ್ನ ಬಗ್ಗೆ ಕೇಳಿ ಬರುತ್ತಿದ್ದ ಸುದ್ದಿಗಳೆಲ್ಲ ರೂಮರ್ಸ್ ಅಷ್ಟೆ, ನನಗೆ ತುಂಬ ಒಳ್ಳೆಯ ಫ್ಯಾಮಿಲಿ ಇದೆ. ನಾನು ಹೌಸ್ ವೈಫ್ ಆಗಿದ್ದೀನಿ, ನಾನು ಸನ್ಯಾಸಿ ಅಲ್ಲ, ನಾನು ಸಂಸಾರಸ್ತೆ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ. ಚರ್ಚ್ ನಲ್ಲಿ ಕೆಲಸ ಮಾಡುತ್ತಿರುವುದು ನಿಜ ಆದರೆ ಸನ್ಯಾಸಿ ಅಲ್ಲ. ನಾನೂ ಚೆನ್ನೈನಲ್ಲಿ ನೆಲೆಸಿದ್ದೀನಿ' ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು.

ಎರಡನೇ ಇನ್ನಿಂಗ್ಸ್ ಪ್ರಾಂಭಿಸಿರುವ ನಟಿ
ಅದೇ ಸಮಯದಲ್ಲಿ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಬರುವುದಾಗಿ ಹೇಳಿದ್ದರು. ಅದರಂತೆ ಈಗ ಮಹಾಲಕ್ಷ್ಮಿ ಬಣ್ಣದ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಕನ್ನಡ ಸಿನಿಮಾವೊಂದರಲ್ಲಿ ನಟಿಸಲು ಸಜ್ಜಾಗಿದ್ದಾರೆ. ಇತ್ತೀಚಿಗೆ ಮಹಾಲಕ್ಷ್ಮಿ ನಟನೆಯ ಹೊಸ ಸಿನಿಮಾದ ಮುಹೂರ್ತ ಕೂಡ ನೆರವೇರಿದೆ.
TRP ರಾಮ ಸಿನಿಮಾದಲ್ಲಿ ನಟನೆ
ಹೌದು, ಮಹಾಲಕ್ಷ್ಮಿ TRP ರಾಮ ಎನ್ನುವ ಸಿನಿಮಾ ಮೂಲಕ ಮತ್ತೆ ಕನ್ನಡ ಚಿತ್ರಾಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದಲ್ಲಿ ಮಹಾಲಕ್ಷ್ಮಿ ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟನೆಗೆ ತುಂಬಾ ಪ್ರಾಮುಖ್ಯತೆ ಇರುವ ಪಾತ್ರವಾಗಿದ್ದರಿಂದ ಈ ಸಿನಿಮಾ ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ.

TRP ರಾಮ ಸಿನಿಮಾದ ಬಗ್ಗೆ
TRP ರಾಮ ಚಿತ್ರದಲ್ಲಿ ರವಿ ಪ್ರಸಾದ್ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಚಿತ್ರಕ್ಕೆ ಚಿತ್ರಸಾಹಿತಿ ಮತ್ತು ನಿರ್ದೇಶಕ ಕವಿರಾಜ್ ಚಿತ್ರಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. 30 ವರ್ಷಗಳ ಬಳಿಕ ಮತ್ತೆ ಮರಳಿರುವ ಮಹಾಲಕ್ಷ್ಮಿ ಅವರನ್ನು ತೆರೆಮೇಲೆ ನೋಡಲು ಅನೇಕರು ಕಾತರರಿದ್ದಾರೆ. ಆದರೆ ಇನ್ನು ಸ್ವಲ್ಪ ದಿನ ಕಾಯಲೇ ಬೇಕು.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm