ಬ್ರೇಕಿಂಗ್ ನ್ಯೂಸ್
06-02-21 11:54 am Source: FILMIBEAT Manjunatha C ಸಿನಿಮಾ
ನಟಿ ತಾಪ್ಸಿ ಪನ್ನು ಟ್ವೀಟ್ ಸಖತ್ ವೈರಲ್ ಆಗಿದೆ. ತಾಪ್ಸಿ ಪನ್ನು ಟ್ವೀಟ್ಗೆ ಅದೇ ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದಾರೆ ಬಿಜೆಪಿಯ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.
ಎಲ್ಲವೂ ಪ್ರಾರಂಭವಾಗಿದ್ದು ರಿಹಾನ್ನ ಟ್ವೀಟ್ ನಿಂದಾಗಿ. ಪಾಪ್ ಗಾಯಕಿ ರಿಹಾನ್ನ ಭಾರತದ ರೈತ ಪ್ರತಿಭಟನೆಗೆ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ವಿರೋಧಿಸಿ, 'ಇದು ನಮ್ಮ ಆಂತರಿಕ ವಿಷಯ ಹೊರಗಿನವರು ಮಾತನಾಡಬಾರದು' ಎಂಬರ್ಥದಲ್ಲಿ ಹಲವು ಬಾಲಿವುಡ್ ನಟರು, ಕ್ರೀಡಾ ಸ್ಟಾರ್ಗಳು ಟ್ವೀಟ್ ಮಾಡಿದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ತಾಪ್ಸಿ ಪನ್ನು, 'ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು' ಎಂದರು. ಈ ಟ್ವೀಟ್ ಭಾರಿ ವೈರಲ್ ಆಯಿತು.
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, 'ಒಬ್ಬ ರಶೀದ್ನಿಂದಾಗಿ ಇಡೀಯ ಮುಸ್ಲಿಂ ಸಮುದಾಯವನ್ನು ಕೆರಳುವಂತೆ ಮಾಡಿದ. ಒಂದು ಕಾರ್ಟೂನು ವಿಶ್ವದ ಮುಸ್ಲೀಮರು ಕೆರಳುವಂತೆ ಮಾಡಿತು. 'ಡಾ ವಿಂಚಿ ಕೋಡ್' ಎಂಬ ಒಂದು ಪುಸ್ತಕ ಕ್ರಿಸ್ತರನ್ನು ಕೆರಳಿಸಿತು. ನೀವು ಕೂಡ ಒಂದು ಏಟಿನಿಂದಾಗಿ ಮದುವೆ ಮುರಿದುಕೊಂಡಿರಿ (ತಪ್ಪಡ್ ಸಿನಿಮಾದಲ್ಲಿ). ಸಿನಿಮಾ ಸಂಭಾಷಣೆ ಹೇಳುವುದಕ್ಕೆ ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ಉಳಿದ ಸಂಗತಿಗಳು ನಿಮ್ಮ ಜ್ಞಾನದಿಂದ ಹೊರಗಿವೆ' ಎಂದಿದ್ದಾರೆ ಪ್ರತಾಪ್ ಸಿಂಹ.
ತಾಪ್ಸಿ ಪನ್ನು ಟ್ವೀಟ್ಗೆ ಹಲವಾರು ಮಂದಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ನಟ ಅಭಯ್ ಡಿಯೋಲ್ ಇನ್ನೂ ಹಲವಾರು ಮಂದಿ ತಾಪ್ಸಿ ಪನ್ನುಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm