ಬ್ರೇಕಿಂಗ್ ನ್ಯೂಸ್
08-02-21 02:47 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.
ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.
ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ. ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm