ಬ್ರೇಕಿಂಗ್ ನ್ಯೂಸ್
08-02-21 02:58 pm Source: FILMIBEAT Bharath Kumar K ಸಿನಿಮಾ
ಕೊನೆಗೂ ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಅಧಿಕೃತವಾಗಿ ದಿನಾಂಕ ಪ್ರಕಟವಾಗಿಲ್ಲ. ಅದರೆ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಯ ಆರಂಭದ ದಿನಾಂಕದ ಬಗ್ಗೆ ಎಕ್ಸ್ಕ್ಲೂಸಿವ್ ಮಾಹಿತಿ ಫಿಲ್ಮಿಬೀಟ್ಗೆ ಲಭ್ಯವಾಗಿದೆ. ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಸಿದ್ದತೆ ಕಾರ್ಯಗಳು ಬಹುತೇಕ ಅಂತ್ಯಕ್ಕೆ ಬಂದಿದ್ದು, ಸ್ಪರ್ಧಿಗಳ ಪಟ್ಟಿಯೂ ಅಂತಿಮವಾಗಿದೆ. ಹೊಸ ಸೀಸನ್ಗೆ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ ಮಾಡಲಾಗುವುದು, ಬಳಿಕ ಬಿಗ್ ಬಾಸ್ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.
ಫೆಬ್ರವರಿ 28ಕ್ಕೆ ಬಿಗ್ ಬಾಸ್ ಆರಂಭ?
ಫಿಲ್ಮಿಬೀಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಬಿಗ್ಬಾಸ್ ಹೊಸ ಆವೃತ್ತಿಗೆ ಸಂಬಂಧಿಸಿದಂತೆ ಎಲ್ಲ ತಯಾರಿ ನಡೆದಿದ್ದು, ಈ ತಿಂಗಳ ಕೊನೆಯ ಭಾನುವಾರದಿಂದ ದೊಡ್ಮನೆ ಆಟ ಆರಂಭವಾಗಲಿದೆಯಂತೆ.

ಸ್ಪರ್ಧಿಗಳಿಗೆ ಕ್ವಾರಂಟೈನ್ ಕಡ್ಡಾಯ?
ಪ್ರಸ್ತುತ ಕೊರೊನಾ ವೈರಸ್ ಭೀತಿ ಇರುವ ಕಾರಣ, ಬಿಗ್ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸುವ ಮುನ್ನ ಕ್ವಾರಂಟೈನ್ ಮಾಡಲಾಗುತ್ತದೆ. ಬಿಗ್ಬಾಸ್ಗೆ ಹೋಗುವ ಎಲ್ಲ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದ್ದು, ನಂತರ ಕೊವಿಡ್ ಪರೀಕ್ಷೆ ಮಾಡಿ ಬಿಗ್ ಮನೆಗೆ ಎಂಟ್ರಿ ನೀಡಲಾಗುತ್ತದೆ.
ದುಬೈನಿಂದ ಮರಳಿದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಮರಳಿದ್ದಾರೆ. ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್ ರೋಣ ಟೀಸರ್ ಹಾಗೂ ಸುದೀಪ್ ಅವರ 25 ವರ್ಷದ ಜರ್ನಿ ವಿಡಿಯೋ ಪ್ರದರ್ಶನ ಮಾಡಲಾಗಿತ್ತು. ಈ ಸಂಭ್ರಮ ಮುಗಿಸಿ ಬಂದ ಸುದೀಪ್ ಈಗ ಬಿಗ್ ಬಾಸ್ ಕಡೆ ಗಮನ ಕೊಡಲಿದ್ದಾರೆ. ಈಗಾಗಲೇ ಪ್ರೋಮೋ ಶೂಟ್ ಮಾಡಿದ್ದು, ಟಿವಿಯಲ್ಲಿ ಪ್ರಸಾರ ಸಹ ಆಗ್ತಿದೆ.

ಈ ಸಲ ಯಾರೆಲ್ಲ ಹೋಗ್ತಾರೆ?
ಪ್ರತಿವರ್ಷದಂತೆ ಈ ವರ್ಷವೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಅನೇಕರ ಹೆಸರು ಚರ್ಚೆಯಲ್ಲಿದೆ. ಯಶ್ ಅವರ ತಾಯಿ ಪುಷ್ಪ, ಹಿರಿಯ ನಟಿ ವಿನಯಪ್ರಸಾದ್, ಬ್ರಹ್ಮಗಂಟು ಗೀತಾ ಅವರು ಹೆಸರು ಹೆಚ್ಚು ಕುತೂಹಲ ಮೂಡಿಸಿದವು. ಆದರೆ, ಇವರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm