ಬ್ರೇಕಿಂಗ್ ನ್ಯೂಸ್
08-02-21 02:58 pm Source: FILMIBEAT Bharath Kumar K ಸಿನಿಮಾ
ಕೊನೆಗೂ ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಅಧಿಕೃತವಾಗಿ ದಿನಾಂಕ ಪ್ರಕಟವಾಗಿಲ್ಲ. ಅದರೆ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಯ ಆರಂಭದ ದಿನಾಂಕದ ಬಗ್ಗೆ ಎಕ್ಸ್ಕ್ಲೂಸಿವ್ ಮಾಹಿತಿ ಫಿಲ್ಮಿಬೀಟ್ಗೆ ಲಭ್ಯವಾಗಿದೆ. ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿಯ ಸಿದ್ದತೆ ಕಾರ್ಯಗಳು ಬಹುತೇಕ ಅಂತ್ಯಕ್ಕೆ ಬಂದಿದ್ದು, ಸ್ಪರ್ಧಿಗಳ ಪಟ್ಟಿಯೂ ಅಂತಿಮವಾಗಿದೆ. ಹೊಸ ಸೀಸನ್ಗೆ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ ಮಾಡಲಾಗುವುದು, ಬಳಿಕ ಬಿಗ್ ಬಾಸ್ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.
ಫೆಬ್ರವರಿ 28ಕ್ಕೆ ಬಿಗ್ ಬಾಸ್ ಆರಂಭ?
ಫಿಲ್ಮಿಬೀಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಬಿಗ್ಬಾಸ್ ಹೊಸ ಆವೃತ್ತಿಗೆ ಸಂಬಂಧಿಸಿದಂತೆ ಎಲ್ಲ ತಯಾರಿ ನಡೆದಿದ್ದು, ಈ ತಿಂಗಳ ಕೊನೆಯ ಭಾನುವಾರದಿಂದ ದೊಡ್ಮನೆ ಆಟ ಆರಂಭವಾಗಲಿದೆಯಂತೆ.

ಸ್ಪರ್ಧಿಗಳಿಗೆ ಕ್ವಾರಂಟೈನ್ ಕಡ್ಡಾಯ?
ಪ್ರಸ್ತುತ ಕೊರೊನಾ ವೈರಸ್ ಭೀತಿ ಇರುವ ಕಾರಣ, ಬಿಗ್ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸುವ ಮುನ್ನ ಕ್ವಾರಂಟೈನ್ ಮಾಡಲಾಗುತ್ತದೆ. ಬಿಗ್ಬಾಸ್ಗೆ ಹೋಗುವ ಎಲ್ಲ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದ್ದು, ನಂತರ ಕೊವಿಡ್ ಪರೀಕ್ಷೆ ಮಾಡಿ ಬಿಗ್ ಮನೆಗೆ ಎಂಟ್ರಿ ನೀಡಲಾಗುತ್ತದೆ.
ದುಬೈನಿಂದ ಮರಳಿದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ ದುಬೈಗೆ ತೆರಳಿದ್ದ ಸುದೀಪ್ ಬೆಂಗಳೂರಿಗೆ ಮರಳಿದ್ದಾರೆ. ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್ ರೋಣ ಟೀಸರ್ ಹಾಗೂ ಸುದೀಪ್ ಅವರ 25 ವರ್ಷದ ಜರ್ನಿ ವಿಡಿಯೋ ಪ್ರದರ್ಶನ ಮಾಡಲಾಗಿತ್ತು. ಈ ಸಂಭ್ರಮ ಮುಗಿಸಿ ಬಂದ ಸುದೀಪ್ ಈಗ ಬಿಗ್ ಬಾಸ್ ಕಡೆ ಗಮನ ಕೊಡಲಿದ್ದಾರೆ. ಈಗಾಗಲೇ ಪ್ರೋಮೋ ಶೂಟ್ ಮಾಡಿದ್ದು, ಟಿವಿಯಲ್ಲಿ ಪ್ರಸಾರ ಸಹ ಆಗ್ತಿದೆ.

ಈ ಸಲ ಯಾರೆಲ್ಲ ಹೋಗ್ತಾರೆ?
ಪ್ರತಿವರ್ಷದಂತೆ ಈ ವರ್ಷವೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಅನೇಕರ ಹೆಸರು ಚರ್ಚೆಯಲ್ಲಿದೆ. ಯಶ್ ಅವರ ತಾಯಿ ಪುಷ್ಪ, ಹಿರಿಯ ನಟಿ ವಿನಯಪ್ರಸಾದ್, ಬ್ರಹ್ಮಗಂಟು ಗೀತಾ ಅವರು ಹೆಸರು ಹೆಚ್ಚು ಕುತೂಹಲ ಮೂಡಿಸಿದವು. ಆದರೆ, ಇವರು ಈ ಸುದ್ದಿಯನ್ನು ನಿರಾಕರಿಸಿದ್ದಾರೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm