ಬ್ರೇಕಿಂಗ್ ನ್ಯೂಸ್
09-02-21 03:05 pm Source: FILMIBEAT Shruthi Gk ಸಿನಿಮಾ
ಬಿಗ್ ಬಾಸ್ ಸೀಸನ್ 8 ಕನ್ನಡ ರಿಯಾಲಿಟಿ ಶೋಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಬಿಗ್ ಬಾಸ್ ಪ್ರಾರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇದೆ. ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಈಗಾಗಲೇ ಸಾಕಷ್ಟು ಕಲಾವಿದರ ಹೆಸರುಗಳು ಜೋರಾಗಿ ಕೇಳಿಬರುತ್ತಿದೆ. ಸಂಭಾವ್ಯ ಸ್ಪರ್ಧಿಗಳ ಹೆಸರುಗಳಲ್ಲಿ ಕಿರುತೆರೆಯ ಖ್ಯಾತ ನಟಿ ಕಾವ್ಯಾ ಗೌಡ ಹೆಸರು ಕೇಳಿಬರುತ್ತಿದೆ. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಇರಲಿದ್ದಾರೆ ಎನ್ನುವ ಮಾತು ಜೋರಾಗಿ ಕೇಳಿಬರುತ್ತಿದೆ. ಇದೇ ತಿಂಗಳು ಕೊನೆಯಲ್ಲಿ ಅಂದರೆ ಫೆಬ್ರವರಿ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಆಗಿ ಓಪನ್ ಆಗಲಿದೆ.
ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಬ್ರಹ್ಮಗಂಟು ಖ್ಯಾತಿಯ ಗೀತಾ, ನಟ ಸುನಿಲ್ ರಾವ್, ಆಶಿಕಾ ರಂಗನಾಥ್ ಸಹೋದರಿ ಅನುಷಾ ರಂಗನಾಥ್ ಸೇರಿದಂತೆ ಸಾಕಷ್ಟು ಹೆಸರುಗಳು ಕೇಳಿಬರುತ್ತಿದೆ. ಆದರೆ ಬಗ್ಗೆ ಕಾವ್ಯಾ ಗೌಡ ಎಂಟ್ರಿ ಬಗ್ಗೆ ಸಹೋದರಿ ಭವ್ಯಾ ಗೌಡ ಸ್ಪಷ್ಟಪಡಿಸಿದ್ದಾರೆ.

ಕಾವ್ಯಾ ಗೌಡ ಈ ಬಾರಿಯ ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲ ಎಂದು ಹೇಳುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಭವ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾವ್ಯಾ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಭವ್ಯಾ ಇಲ್ಲ ಸುಳ್ಳು ಸುದ್ದಿ ಇದು ಎಂದು ಹೇಳಿದ್ದಾರೆ.
ಅಂದಹಾಗೆ ಬಿಗ್ ಬಾಸ್ ಮನೆಗೆ ಹೋಗುವವರು ಯಾರು ಬಹಿರಂಗವಾಗಿ ಹೇಳಿ ಹೋಗುವುದಿಲ್ಲ. ಹಾಗಾಗಿ ಕಾವ್ಯಾ ಈ ಬಾರಿ ಬಿಗ್ ಬಾಸ್ ನಲ್ಲಿ ಭಾಗಿಯಾಗಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಗೊತ್ತಾಗಬೇಕಾದರೆ ಬಿಗ್ ಬಾಸ್ ಪ್ರಾರಂಭವಾಗುವ ವರೆಗೂ ಕಾಯಲೇ ಬೇಕು.
ಕಾವ್ಯಾ ಕೊನೆಯದಾಗಿ ರಾಧ ರಮಣ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಶ್ವೇತಾ ಪ್ರಸಾದ್ ಬಿಟ್ಟುಹೋದ ಜಾಗಕ್ಕೆ ಕಾವ್ಯಾ ಎಂಟ್ರಿ ಕೊಟ್ಟಿದ್ದರು. ರಾಧಾ ಮಿಸ್ ಆಗಿ ಕಾವ್ಯಾ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿ ಬಳಿಕ ಕಾವ್ಯಾ ಯಾವುದೇ ಸೀರಿಯಲ್ ನಲ್ಲೂ ಕಾಣಿಸಿಕೊಂಡಿಲ್ಲ. ಹಾಗಾಗಿ ಈ ಬಾರಿಯ ಬಿಗ್ ಬಾಸ್ ನಲ್ಲಿ ಇರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm