ಬ್ರೇಕಿಂಗ್ ನ್ಯೂಸ್
09-02-21 03:19 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಒಂದಾಗಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲವ್ ಮಾಕ್ಟೇಲ್ ಜೋಡಿಯ ಮದುವೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದೆ.
ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

'ನಮ್ಮ ಕುಟುಂಬದಲ್ಲಿ ಯಾರದೇ ಮದುವೆ ಆದರೂ ಈ ವಿಶೇಷ ಪೂಜೆಯ ಮೂಲಕ ಪ್ರಾರಂಭ ಮಾಡುತ್ತೇವೆ' ಎಂದು ಹೇಳಿದ್ದಾರೆ. ಮಿಲನಾ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಶೇಷ ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ, ಆದರೆ ಈ ಪೂಜೆ ತನ್ನ ಊರಿನಲ್ಲಿ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ವಿಶೇಷವಾದ ಮಂಟಪದಲ್ಲಿ ಮದುವೆ
ಮಿಲನಾ ಮದುವೆಗೆ ಇನ್ನು 5 ದಿನಗಳು ಬಾಕಿ ಇದೆ. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರಬೇಕು ಎಂದು ಪ್ಲಾನ್ ಮಾಡಿದ್ದರು. ಹಾಗಾಗಿಯೇ ಇವರು ಲಾಕ್ ಡೌನ್ ಎಲ್ಲ ಮುಗಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರ ಆಸೆಯಂತೆ ಮದುವೆ ಈಜುಕೊಳದ ಮಧ್ಯೆ ವಿಶೇಷ ಮಂಟಪದಲ್ಲಿ ಕೃಷ್ಣ ಮತ್ತು ಮಿಲನಾ ಹೊಸಜೀವನಕ್ಕೆ ಕಾಲಿಡುತ್ತಿದ್ದಾರೆ.

ಮದುವೆ ದಿನ ಲವ್ ಮಾಕ್ ಟೇಲ್ ಹಾಡು ರಿಲೀಸ್
ಕೃಷ್ಣ ಮತ್ತುಮಿಲನಾ ಇಬ್ಬರು ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇಬ್ಬರು ಲವ್ ಮಾಕ್ ಟೇಲ್ ಸಿನಿಮಾ ಬಳಿಕ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದರು. ಇದೀಗ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm