ಬ್ರೇಕಿಂಗ್ ನ್ಯೂಸ್
09-02-21 03:19 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಒಂದಾಗಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲವ್ ಮಾಕ್ಟೇಲ್ ಜೋಡಿಯ ಮದುವೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದೆ.
ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

'ನಮ್ಮ ಕುಟುಂಬದಲ್ಲಿ ಯಾರದೇ ಮದುವೆ ಆದರೂ ಈ ವಿಶೇಷ ಪೂಜೆಯ ಮೂಲಕ ಪ್ರಾರಂಭ ಮಾಡುತ್ತೇವೆ' ಎಂದು ಹೇಳಿದ್ದಾರೆ. ಮಿಲನಾ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಶೇಷ ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ, ಆದರೆ ಈ ಪೂಜೆ ತನ್ನ ಊರಿನಲ್ಲಿ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ವಿಶೇಷವಾದ ಮಂಟಪದಲ್ಲಿ ಮದುವೆ
ಮಿಲನಾ ಮದುವೆಗೆ ಇನ್ನು 5 ದಿನಗಳು ಬಾಕಿ ಇದೆ. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರಬೇಕು ಎಂದು ಪ್ಲಾನ್ ಮಾಡಿದ್ದರು. ಹಾಗಾಗಿಯೇ ಇವರು ಲಾಕ್ ಡೌನ್ ಎಲ್ಲ ಮುಗಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರ ಆಸೆಯಂತೆ ಮದುವೆ ಈಜುಕೊಳದ ಮಧ್ಯೆ ವಿಶೇಷ ಮಂಟಪದಲ್ಲಿ ಕೃಷ್ಣ ಮತ್ತು ಮಿಲನಾ ಹೊಸಜೀವನಕ್ಕೆ ಕಾಲಿಡುತ್ತಿದ್ದಾರೆ.

ಮದುವೆ ದಿನ ಲವ್ ಮಾಕ್ ಟೇಲ್ ಹಾಡು ರಿಲೀಸ್
ಕೃಷ್ಣ ಮತ್ತುಮಿಲನಾ ಇಬ್ಬರು ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇಬ್ಬರು ಲವ್ ಮಾಕ್ ಟೇಲ್ ಸಿನಿಮಾ ಬಳಿಕ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದರು. ಇದೀಗ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm