ಬ್ರೇಕಿಂಗ್ ನ್ಯೂಸ್
09-02-21 03:19 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸುಂದರ ಜೋಡಿಗಳಲ್ಲಿ ಒಂದಾಗಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ತಿಂಗಳು ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲವ್ ಮಾಕ್ಟೇಲ್ ಜೋಡಿಯ ಮದುವೆಗೆ ಇನ್ನೇನು ದಿನಗಣನೆ ಪ್ರಾರಂಭವಾಗಿದೆ.
ಈಗಾಗಲೇ ಮದುವೆ ಶಾಸ್ತ್ರಗಳು ನಡೆಯುತ್ತಿದ್ದು, ಮಿಲನಾ ನಾಗರಾಜ್ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ. ಮದುವೆಯ ಮೊದಲ ಶಾಸ್ತ್ರದ ವಿಡಿಯೋವನ್ನು ಮಿಲನಾ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಮದುವೆ ಶಾಸ್ತ್ರಗಳು ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಮಿಲನಾ ನಾಗರಾಜ್ ಮತ್ತು ಕೃಷ್ಣ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

'ನಮ್ಮ ಕುಟುಂಬದಲ್ಲಿ ಯಾರದೇ ಮದುವೆ ಆದರೂ ಈ ವಿಶೇಷ ಪೂಜೆಯ ಮೂಲಕ ಪ್ರಾರಂಭ ಮಾಡುತ್ತೇವೆ' ಎಂದು ಹೇಳಿದ್ದಾರೆ. ಮಿಲನಾ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಶೇಷ ಪೂಜೆಯ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ, ಆದರೆ ಈ ಪೂಜೆ ತನ್ನ ಊರಿನಲ್ಲಿ ನಡೆಯುತ್ತಿರುವ ಹಾಗೆ ಕಾಣುತ್ತಿದೆ.
ವಿಶೇಷವಾದ ಮಂಟಪದಲ್ಲಿ ಮದುವೆ
ಮಿಲನಾ ಮದುವೆಗೆ ಇನ್ನು 5 ದಿನಗಳು ಬಾಕಿ ಇದೆ. ಮದುವೆ ಬಗ್ಗೆ ದೊಡ್ಡ ಕನಸು ಕಂಡಿದ್ದ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರಬೇಕು ಎಂದು ಪ್ಲಾನ್ ಮಾಡಿದ್ದರು. ಹಾಗಾಗಿಯೇ ಇವರು ಲಾಕ್ ಡೌನ್ ಎಲ್ಲ ಮುಗಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರ ಆಸೆಯಂತೆ ಮದುವೆ ಈಜುಕೊಳದ ಮಧ್ಯೆ ವಿಶೇಷ ಮಂಟಪದಲ್ಲಿ ಕೃಷ್ಣ ಮತ್ತು ಮಿಲನಾ ಹೊಸಜೀವನಕ್ಕೆ ಕಾಲಿಡುತ್ತಿದ್ದಾರೆ.

ಮದುವೆ ದಿನ ಲವ್ ಮಾಕ್ ಟೇಲ್ ಹಾಡು ರಿಲೀಸ್
ಕೃಷ್ಣ ಮತ್ತುಮಿಲನಾ ಇಬ್ಬರು ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇಬ್ಬರು ಲವ್ ಮಾಕ್ ಟೇಲ್ ಸಿನಿಮಾ ಬಳಿಕ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದರು. ಇದೀಗ ಈ ಜೋಡಿ ಲವ್ ಮಾಕ್ ಟೇಲ್ -2 ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ವಿಶೇಷ ಎಂದರೆ ಮದುವೆ ದಿನವೇ ಅಂದರೆ ಫೆಬ್ರವರಿ 14ರಂದು ಲವ್ ಮಾಕ್ ಟೇಲ್-2 ಸಿನಿಮಾದ ಒಂದು ಹಾಡು ಕೂಡ ರಿಲೀಸ್ ಆಗುತ್ತಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm