ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm