ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm