ಬ್ರೇಕಿಂಗ್ ನ್ಯೂಸ್
11-02-21 12:28 pm Source: FILMIBEAT Bharath Kumar K ಸಿನಿಮಾ
2020ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಪಟ್ಟವನ್ನು ತೆಲಂಗಾಣ ಮೂಲದ ಮಾನಸ ವಾರಣಾಸಿ ಮುಡಿಗೇರಿಸಿಕೊಂಡಿದ್ದಾರೆ. ಫೆಬ್ರವರಿ 11 ರಂದು ಸಂಜೆ ಮಿಸ್ ಇಂಡಿಯಾ ವಿನ್ನರ್ ಹೆಸರು ಪ್ರಕಟಿಸಲಾಯಿತು. 2019ರ ಮಿಸ್ ಇಂಡಿಯಾ ರಾಜಸ್ಥಾನದ ಸುಮನ್ ರತನ್ ಸಿಂಗ್ ರಾವ್ ಅವರು ನೂತನ ಮಿಸ್ ಇಂಡಿಯಾ ಮಾನಸ ಅವರಿಗೆ 'ಮಿಸ್ ಇಂಡಿಯಾ 2020' ಪಟ್ಟಾಭಿಷೇಕ ಮಾಡಿದರು. ಮಾನಸ ವಾರಣಾಸಿ ತೆಲಂಗಾಣದ ಹೈದರಾಬಾದ್ನಲ್ಲಿ ನೆಲೆಸಿದ್ದು, ಬುಧವಾರ ರಾತ್ರಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ವಿಜೇತರಾಗಿ ಹೊರಹೊಮ್ಮಿದರು. ಇಂಜಿನಿಯರ್ ಪದವಿ ಮುಗಿಸಿರುವ ಮಾನಸ ವೃತ್ತಿಯಲ್ಲಿ ಹಣಕಾಸು ಮಾಹಿತಿ ವಿನಿಮಯ ವಿಶ್ಲೇಷಕಿ ಆಗಿದ್ದಾರೆ.

ಮಿಸ್ ವರ್ಲ್ಡ್ ಸ್ಪರ್ಧೆಗೆ ಪ್ರವೇಶ
2021ರ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಮಿಸ್ ವರ್ಲ್ಡ್ ಸ್ಪರ್ಧೆಗೆ ಭಾರತದಿಂದ 23 ವರ್ಷದ ಮಾನಸ ವಾರಣಾಸಿ ಆಯ್ಕೆಯಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯುವ ಐತಿಹಾಸಿಕ 70ನೇ ವರ್ಷದ ಮಿಸ್ ವರ್ಲ್ಡ್ ವೇದಿಕೆಯಲ್ಲಿ ಮಾನಸ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಾನಸ ವಾರಣಾಸಿ ಕುರಿತು
ಮಾನಸ ವಾರಣಾಸಿ ಪುಸ್ತಕಗಳನ್ನು ಓದುವುದು, ಸಂಗೀತ ಮತ್ತು ಯೋಗ ಅಭ್ಯಾಸ ಸೇರಿದಂತೆ ಹಲವು ವಿಚಾರಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಮಾನಸಾ ಬಹಳ ನಾಚಿಕೆ ಸ್ವಭಾವದ ಮಗುವಾಗಿದ್ದಳು. ಬೆಳೆಯುತ್ತಿದ್ದಂತೆ ಭರತನಾಟ್ಯ ಮತ್ತು ಸಂಗೀತಕ್ಕೆ ಹೆಚ್ಚು ಆದ್ಯತೆ ನೀಡಿದರು. ಈ ಕಲಾ ಪ್ರಕಾರಗಳು ಮಾನಸಾ ಅವರ ಜೀವನದಲ್ಲಿ ಧೈರ್ಯ ಮತ್ತು ಸ್ವಯಂ ಆತ್ಮವಿಶ್ವಾಸ ಹೆಚ್ಚಾಗಲು ಸಹಕಾರಿಯಾಗಿದೆ ಹಾಗೂ ಪ್ರಮುಖ ಪಾಠಗಳನ್ನು ಕಲಿಸಿದೆ ಎಂದು ಮಿಸ್ ಇಂಡಿಯಾ ವರದಿ ಮಾಡಿದೆ.

ರನ್ನರ್ ಅಪ್ ಯಾರು?
ಮಾನಸ ವಾರಣಾಸಿ ಮಿಸ್ ಇಂಡಿಯಾ ವಿನ್ನರ್ ಆಗಿದ್ದರೆ, ಹರಿಯಾಣದ ಮಾನಿಕಾ ಶಿಯೋಕಾಂಡ್ 'ಮಿಸ್ ಗ್ರ್ಯಾಂಡ್ ಇಂಡಿಯಾ 2020' ಪಟ್ಟ ಪಡೆದುಕೊಂಡರು. ಮತ್ತು ಉತ್ತರ ಪ್ರದೇಶದ ಮಾನ್ಯಾ ಸಿಂಗ್ 'ಮಿಸ್ ಇಂಡಿಯಾ 2020 ರನ್ನರ್ ಅಪ್' ಆಗಿ ಕಿರೀಟವನ್ನು ಪಡೆದುಕೊಂಡರು.

ಜ್ಯೂರಿಗಳು ಯಾರಿದ್ದರು?
ಅಂದ್ಹಾಗೆ, ಮಿಸ್ ಇಂಡಿಯಾ 2020 ಸ್ಪರ್ಧೆಗೆ ತೀರ್ಪುಗಾರರಾಗಿ ನಟಿ ನೇಹಾ ಧೂಪಿಯಾ, ಚಿತ್ರಾಂಗದ ಸಿಂಗ್, ಪುಲ್ಕಿತ್ ಸಾಮ್ರಾಟ್ ಮತ್ತು ಖ್ಯಾತ ಡಿಸೈನರ್ ಡ್ಯೂ ಫಾಲ್ಗುನಿ ಮತ್ತು ಶೇನ್ ಪೀಕಾಕ್ ಅವರಂತಹ ಸೆಲೆಬ್ರಿಟಿಗಳನ್ನು ಒಳಗೊಂಡಿತ್ತು. ಈ ಐವರ ಸಮಿತಿಯೂ ಮಿಸ್ ಇಂಡಿಯಾ ಫಲಿತಾಂಶ ನಿರ್ಧರಿಸಿದೆ.
Photo Gallery: 'ಮಿಸ್ ಇಂಡಿಯಾ 2020' ಪ್ರಶಸ್ತಿ ಗೆದ್ದ ತೆಲಂಗಾಣ ಸುಂದರಿ ಮಾನಸ
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am