ಬ್ರೇಕಿಂಗ್ ನ್ಯೂಸ್
11-02-21 12:28 pm Source: FILMIBEAT Bharath Kumar K ಸಿನಿಮಾ
2020ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಪಟ್ಟವನ್ನು ತೆಲಂಗಾಣ ಮೂಲದ ಮಾನಸ ವಾರಣಾಸಿ ಮುಡಿಗೇರಿಸಿಕೊಂಡಿದ್ದಾರೆ. ಫೆಬ್ರವರಿ 11 ರಂದು ಸಂಜೆ ಮಿಸ್ ಇಂಡಿಯಾ ವಿನ್ನರ್ ಹೆಸರು ಪ್ರಕಟಿಸಲಾಯಿತು. 2019ರ ಮಿಸ್ ಇಂಡಿಯಾ ರಾಜಸ್ಥಾನದ ಸುಮನ್ ರತನ್ ಸಿಂಗ್ ರಾವ್ ಅವರು ನೂತನ ಮಿಸ್ ಇಂಡಿಯಾ ಮಾನಸ ಅವರಿಗೆ 'ಮಿಸ್ ಇಂಡಿಯಾ 2020' ಪಟ್ಟಾಭಿಷೇಕ ಮಾಡಿದರು. ಮಾನಸ ವಾರಣಾಸಿ ತೆಲಂಗಾಣದ ಹೈದರಾಬಾದ್ನಲ್ಲಿ ನೆಲೆಸಿದ್ದು, ಬುಧವಾರ ರಾತ್ರಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ವಿಜೇತರಾಗಿ ಹೊರಹೊಮ್ಮಿದರು. ಇಂಜಿನಿಯರ್ ಪದವಿ ಮುಗಿಸಿರುವ ಮಾನಸ ವೃತ್ತಿಯಲ್ಲಿ ಹಣಕಾಸು ಮಾಹಿತಿ ವಿನಿಮಯ ವಿಶ್ಲೇಷಕಿ ಆಗಿದ್ದಾರೆ.

ಮಿಸ್ ವರ್ಲ್ಡ್ ಸ್ಪರ್ಧೆಗೆ ಪ್ರವೇಶ
2021ರ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಮಿಸ್ ವರ್ಲ್ಡ್ ಸ್ಪರ್ಧೆಗೆ ಭಾರತದಿಂದ 23 ವರ್ಷದ ಮಾನಸ ವಾರಣಾಸಿ ಆಯ್ಕೆಯಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯುವ ಐತಿಹಾಸಿಕ 70ನೇ ವರ್ಷದ ಮಿಸ್ ವರ್ಲ್ಡ್ ವೇದಿಕೆಯಲ್ಲಿ ಮಾನಸ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಾನಸ ವಾರಣಾಸಿ ಕುರಿತು
ಮಾನಸ ವಾರಣಾಸಿ ಪುಸ್ತಕಗಳನ್ನು ಓದುವುದು, ಸಂಗೀತ ಮತ್ತು ಯೋಗ ಅಭ್ಯಾಸ ಸೇರಿದಂತೆ ಹಲವು ವಿಚಾರಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಮಾನಸಾ ಬಹಳ ನಾಚಿಕೆ ಸ್ವಭಾವದ ಮಗುವಾಗಿದ್ದಳು. ಬೆಳೆಯುತ್ತಿದ್ದಂತೆ ಭರತನಾಟ್ಯ ಮತ್ತು ಸಂಗೀತಕ್ಕೆ ಹೆಚ್ಚು ಆದ್ಯತೆ ನೀಡಿದರು. ಈ ಕಲಾ ಪ್ರಕಾರಗಳು ಮಾನಸಾ ಅವರ ಜೀವನದಲ್ಲಿ ಧೈರ್ಯ ಮತ್ತು ಸ್ವಯಂ ಆತ್ಮವಿಶ್ವಾಸ ಹೆಚ್ಚಾಗಲು ಸಹಕಾರಿಯಾಗಿದೆ ಹಾಗೂ ಪ್ರಮುಖ ಪಾಠಗಳನ್ನು ಕಲಿಸಿದೆ ಎಂದು ಮಿಸ್ ಇಂಡಿಯಾ ವರದಿ ಮಾಡಿದೆ.

ರನ್ನರ್ ಅಪ್ ಯಾರು?
ಮಾನಸ ವಾರಣಾಸಿ ಮಿಸ್ ಇಂಡಿಯಾ ವಿನ್ನರ್ ಆಗಿದ್ದರೆ, ಹರಿಯಾಣದ ಮಾನಿಕಾ ಶಿಯೋಕಾಂಡ್ 'ಮಿಸ್ ಗ್ರ್ಯಾಂಡ್ ಇಂಡಿಯಾ 2020' ಪಟ್ಟ ಪಡೆದುಕೊಂಡರು. ಮತ್ತು ಉತ್ತರ ಪ್ರದೇಶದ ಮಾನ್ಯಾ ಸಿಂಗ್ 'ಮಿಸ್ ಇಂಡಿಯಾ 2020 ರನ್ನರ್ ಅಪ್' ಆಗಿ ಕಿರೀಟವನ್ನು ಪಡೆದುಕೊಂಡರು.

ಜ್ಯೂರಿಗಳು ಯಾರಿದ್ದರು?
ಅಂದ್ಹಾಗೆ, ಮಿಸ್ ಇಂಡಿಯಾ 2020 ಸ್ಪರ್ಧೆಗೆ ತೀರ್ಪುಗಾರರಾಗಿ ನಟಿ ನೇಹಾ ಧೂಪಿಯಾ, ಚಿತ್ರಾಂಗದ ಸಿಂಗ್, ಪುಲ್ಕಿತ್ ಸಾಮ್ರಾಟ್ ಮತ್ತು ಖ್ಯಾತ ಡಿಸೈನರ್ ಡ್ಯೂ ಫಾಲ್ಗುನಿ ಮತ್ತು ಶೇನ್ ಪೀಕಾಕ್ ಅವರಂತಹ ಸೆಲೆಬ್ರಿಟಿಗಳನ್ನು ಒಳಗೊಂಡಿತ್ತು. ಈ ಐವರ ಸಮಿತಿಯೂ ಮಿಸ್ ಇಂಡಿಯಾ ಫಲಿತಾಂಶ ನಿರ್ಧರಿಸಿದೆ.
Photo Gallery: 'ಮಿಸ್ ಇಂಡಿಯಾ 2020' ಪ್ರಶಸ್ತಿ ಗೆದ್ದ ತೆಲಂಗಾಣ ಸುಂದರಿ ಮಾನಸ
This News Article is a Copy of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm