ಬ್ರೇಕಿಂಗ್ ನ್ಯೂಸ್
11-02-21 12:56 pm Source: FILMIBEAT Manjunatha C ಸಿನಿಮಾ
ದೆಹಲಿ ರೈತ ಹೋರಾಟಕ್ಕೆ ಬಾಲಿವುಡ್ನ ಬಹುಪಾಲು ಸೆಲೆಬ್ರಿಟಿಗಳು ಬೆಂಬಲ ಸೂಚಿಸಿಲ್ಲ, ಕೆಲವರಂತೂ ರೈತ ಹೋರಾಟದ ವಿರುದ್ಧ ಮಾತನಾಡಿದ್ದಾರೆ. ಹಲವರು ಮೌನವಾಗಿದ್ದಾರೆ. ಆದರೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವಣ್ಣ, 'ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರು ಕೇಳಿದ್ದು ಬರೆದುಕೊಡ್ತಿದ್ದೆ. ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು' ಎಂದು ಹೇಳಿದ್ದಾರೆ. ''ರೈತರು ರಸ್ತೆಯಲ್ಲಿ ಕುಳಿತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯುತ್ತೆ. ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ ಎನ್ನುತ್ತಾರೆ.
ಆದರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದರಿಂದ ಏನೂ ಸಾಧ್ಯವಾಗಲ್ಲ, ಅದನ್ನು ಸರ್ಕಾರ ಬಗೆಹರಿಸಬೇಕು' ಎಂದಿದ್ದಾರೆ ಶಿವರಾಜ್ ಕುಮಾರ್.
'ಒಂದು ವೇಳೆ ನಾವು ಬೀದಿಗೆ ಇಳಿಯುವುದರಿಂದ ಸಮಸ್ಯೆ ಬಗೆಹರಿಯುವುದಾದರೆ ನಾವು ಸಿದ್ಧ. ಯಾರೇ ರೈತರ ಪರವಾಗಿ ನಿಂತರೆ ಬೆಂಬಲ ಇದೆ' ಎಂದಿದ್ದಾರೆ ಶಿವಣ್ಣ. ''ನಮ್ಮ ಸಮಸ್ಯೆಗಳನ್ನ ನಾವು ಪರಿಹಾರ ಮಾಡಿಕೊಳ್ಳೋಕೆ ಆಗುತ್ತಿಲ್ಲ, ಅಂತದ್ರಲ್ಲಿ ನಮ್ಮ ಕೈಯಲ್ಲಿ ಏನಿದೆ, ರೈತರ ಏನೇ ಮಾಡಿದರೂ ನಮ್ಮ ಬೆಂಬಲ ಕಂಡಿದ ಇದೆ.
ನನ್ನ ಕೈಯಲ್ಲಿ ಆಧಿಕಾರ ಇದ್ದಿದ್ದರೆ, ಎಲ್ಲವನ್ನೂ ಬರೆದು ಕೊಡ್ತಿದ್ದೆ'' ಎಂದಿದ್ದಾರೆ ಶಿವಣ್ಣ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಹೊಸ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಅವರು ಹಾಡಿನ ರೆಕಾರ್ಡ್ ಮಾಡಿದರು. ರವಿಚಂದ್ರನ್ ನಟಿಸುತ್ತಿರುವ 'ಕನ್ನಡಿಗ' ಸಿನಿಮಾದ ಹಾಡಿಗೆ ಶಿವಣ್ಣ ದನಿಯಾದರು. ಆ ಸಮಯದಲ್ಲಿ ಎದುರಾದ ಮಾಧ್ಯಮಗಳೊಟ್ಟಿಗೆ ಶಿವಣ್ಣ ಮೇಲಿನಂತೆ ಮಾತನಾಡಿದ್ದಾರೆ.
ಶಿವರಾಜ್ ಕುಮಾರ್ ಅವರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ. ರೈತ ಹೋರಾಟದ ಬಗ್ಗೆ ಮಾತನಾಡಲು ಬಾಲಿವುಡ್ ನಟರೇ ಭಯ ಪಡುತ್ತಿರುವ ಹೊತ್ತಿನಲ್ಲಿ ಶಿವಣ್ಣ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿರುವುದಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿದೆ.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm